ಮಂಗಳೂರು: ಹಂಚು ಮತ್ತು ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತಿದ್ದ ಜಾರ್ಖಂಡ್ ಮೂಲದ ದಂಪತಿಗಳ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಅಮಾನುಷ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಗುರುಪುರ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ.
ಪರಾರಿ ಎಂಬಲ್ಲಿ ರಾಜ್ ಟೈಲ್ಸ್ ಎಂಬ ಹೆಸರಿನ ಹೆಂಚಿನ ಕಾರ್ಖಾನೆ ಕಾರ್ಯಾಚರಿಸುತ್ತಿದ್ದು , ಇಲ್ಲಿ ರಾಜ್ಯ, ಹೊರರಾಜ್ಯದ ಪುರುಷ ಮತ್ತು ಮಹಿಳಾ ಕಾರ್ಮಿಕರೂ ದುಡಿಯುತ್ತಿದ್ದಾರೆ. ಈ ಪೈಕಿ ಜಾರ್ಖಂಡ್ ಮೂಲದ ಮಹಿಳೆಯೋರ್ವರ 8 ವರ್ಷದ ಹೆಣ್ಣು ಮಗು ರವಿವಾರ ಸಂಜೆಯಿಂದ ನಾಪತ್ತೆಯಾಗಿತ್ತು.
ಮಧ್ಯಾಹ್ನದ ವೇಳೆಗೆ ಮಗು ನಾಪತ್ತೆಯಾಗಿದ್ದು, ಕೆಲಸದಲ್ಲಿದ್ದ ತಂದೆ ತಾಯಿಗೆ ಸಂಜೆ ನಾಲ್ಕು ಗಂಟೆಯ ವೇಳೆ ಗಮನಕ್ಕೆ ಬಂದಿದೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೋಲೀಸರು, ಶೀಘ್ರದಲ್ಲೇ ಪೂರ್ಣ ಮಾಹಿತಿಯನ್ನು ನೀಡುವುದಾಗಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ