ದುಬೈ: ಪಾಕಿಸ್ತಾನೀಯರು ಗಲ್ಫ್ ಪ್ರದೇಶದ ಭದ್ರತೆಗೆ ಬೆದರಿಕೆಯಾಗಿದ್ದಾರೆ ಎಂದು ದುಬೈ ಭದ್ರತಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ದಹಿ ಖಲ್ಫಾನ್ ತಿಳಿಸಿದ್ದಾರೆ. ದುಬೈನಲ್ಲಿ ನಡೆದ ಅಮಲು ಪದಾರ್ಥ ಬೇಟೆಯಲ್ಲಿ ಪಾಕಿಸ್ತಾನೀ ತಂಡವೊಂದನ್ನು ಬಂಧಿಸಲ್ಪಟ್ಟ ಹಿನ್ನೆಲೆಯಲ್ಲಿ ಅವರು ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದಾರೆ.
ಭಾರತೀಯರು ಶಿಸ್ತುಬದ್ಧರಾಗಿದ್ದಾರೆ. ಆದರೆ,ಪಾಕಿಸ್ತಾನೀಯರು ಸೋಮಾರಿತನ, ಅಪರಾಧಗಳು ಮತ್ತು ಕಳ್ಳಸಾಗಾಣಿಕೆಯಲ್ಲಿ ವ್ಯಾಪಕವಾಗಿ ತೊಡಗಿಸಿಕೊಂಡಿದ್ದಾರೆ.
ಗಲ್ಫ್ ದೇಶಗಳಿಗೆ ಲಹರಿ ಪದಾರ್ಥಗಳನ್ನು ತರುವ ಪಾಕಿಸ್ತಾನಿಗಳು ಈ ಪ್ರದೇಶಕ್ಕೆ ಗಂಭೀರ ಸವಾಲಾಗಿದ್ದಾರೆ. “ಪಾಕಿಸ್ತಾನದ ಜನರನ್ನು ಸೇವೆಗೆ ನಿಲ್ಲಿಸಬಾರದೆಂದು ದೇಶದ ನಾಗರಿಕರಿಗೆ ನಾನು ಮನವಿ ಮಾಡುತ್ತಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪಾಕಿಸ್ತಾನದಿಂದ ಕೆಲಸಕ್ಕಾಗಿ ನೇಮಕಾತಿಯನ್ನು ನಿಲ್ಲಿಸುವ ನಿರ್ಧಾರ ರಾಷ್ಟ್ರೀಯ ಮಟ್ಟದಲ್ಲಿ ಅವಶ್ಯಕವಾಗಿದೆ ಎಂದು ದಹಿ ಖಾಲ್ಫಾನ್ ಹೇಳಿದರು. ಪಾಕಿಸ್ತಾನದ ಪ್ರಜೆಗಳ ತನಿಖೆಯನ್ನು ಬಿಗಿಗೊಳಿಸಬೇಕು ಎಂದು ಅವರು ಟ್ವೀಟ್ ಮಾಡಿದರು. ಟ್ವಿಟ್ ಗಳೊಂದಿಗೆ ಲಹರಿ ಬೇಟೆಯಲ್ಲಿ ಸಿಕ್ಕಿಬಿದ್ದ ಪಾಕಿಸ್ತಾನಿಗಳ ಛಾಯಾಚಿತ್ರವನ್ನು ಹಂಚಿಕೊಂಡಿದ್ದಾರೆ.
2013 ರವರೆಗೆ ದುಬೈ ಪೊಲೀಸ್ ಅಧಿಕಾರಿಯಾಗಿದ್ದ ದಹಿ ಖಲ್ಫಾನ್ ಅವರ ಟ್ವೀಟ್ಗಳನ್ನು ರಾಷ್ಟ್ರೀಯ ಮಾಧ್ಯಮಗಳು ಬಹಳ ಪ್ರಾಮುಖ್ಯತೆಯಿಂದ ವರದಿ ಮಾಡುತ್ತಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು