ಜಿದ್ದಾ| ಸೌದಿ ಅರೇಬಿಯಾ ಅನುಮತಿ ನೀಡಿದ್ದರೂ, ಭಾರತದಿಂದ ಸೌದಿ ಅರೇಬಿಯಾಗೆ ನೇರ ವಿಮಾನವನ್ನು ಅನುಮತಿಸದ ಕೇಂದ್ರದ ಮೋದಿ ಸರ್ಕಾರದ ನಿಲುವು ಖಂಡನೀಯವಾಗಿದೆ ಎಂದು ICF ಸೌದಿ ರಾಷ್ಟ್ರೀಯ ಸಮಿತಿ ಹೇಳಿದೆ.
ಕೋವಿಡ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ಥಗಿತಗೊಂಡಿದ್ದ ವಿಮಾನ ಸೇವೆಗಳನ್ನು ಡಿಸೆಂಬರ್ 1 ರಿಂದ ಪುನರಾರಂಭಿಸಲು ಸೌದಿ ಸರಕಾರ ನಿರ್ಧರಿಸಿದೆ. ವರ್ಷಗಳಿಂದ ಕಂಗಾಲಾಗಿದ್ದ ಸೌದಿ ವಲಸಿಗರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಆದರೆ GCC ಯಲ್ಲಿ ಸೌದಿ ಅರೇಬಿಯಾವನ್ನು ಹೊರತುಪಡಿಸಿ ಎಲ್ಲಾ ದೇಶಗಳು ಸಹಿತ 99 ದೇಶಗಳ ಜನರಿಗೆ ಕ್ವಾರಂಟೈನ್ ಕಾರ್ಯವಿಧಾನಗಳ ಮೇಲೆ ರಿಯಾಯಿತಿಗಳನ್ನು ನೀಡಿರುವ ಮೋದಿ ಸರ್ಕಾರವು, ಸೌದಿಯಿಂದ ಆಗಮಿಸುವವರಿಗೆ ಕ್ವಾರಂಟೈನ್ಗೆ ಬದ್ಧವಾಗಿರುವಂತೆ ಕೇಳುತ್ತಿದೆ. ಇದು ಯಾವುದೋ ಹಿಡನ್ ಅಜೆಂಡಾಗಳ ಭಾಗವಾಗಿದೆ ಎಂಬ ಅನುಮಾನವಿದೆ ಎಂದು ICF ಸೌದಿ ರಾಷ್ಟ್ರೀಯ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ವಲಸಿಗ ಸಮುದಾಯ ಪದೇ ಪದೇ ವಿನಂತಿಸಿದರೂ, ಸೌದಿ ಅರೇಬಿಯಾದೊಂದಿಗೆ ಏರ್ ಬಬಲ್ ಒಪ್ಪಂದಕ್ಕೆ ಪ್ರವೇಶಿಸಲು ಮೋದಿ ಸರ್ಕಾರಕ್ಕೆ ಇಷ್ಟವಿರಲಿಲ್ಲ.
ತನ್ನ ದೇಶದಲ್ಲಿನ ಸ್ವಂತ ನಾಗರಿಕರಿಗೆ ಆಹಾರ ಮತ್ತು ಉದ್ಯೋಗವನ್ನು ನೀಡಲು ಈ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲವೆಂದು ಮಾತ್ರವಲ್ಲ, ವಿದೇಶದಲ್ಲಿ ಕೆಲಸ ಮಾಡುವವರೊಂದಿಗೆ ಮಾನವೀಯತೆಯನ್ನೂ ತೋರಿಸುತ್ತಿಲ್ಲ ಎಂದು ICF, ಮೋದಿ ಸರ್ಕಾರವನ್ನು ದೂಷಿಸಿದೆ.
ಸಯ್ಯಿದ್ ಹಬೀಬ್ ಅಲ್ ಬುಖಾರಿ ಅಧ್ಯಕ್ಷತೆ ವಹಿಸಿದ್ದರು. ಬಶೀರ್ ಎರ್ನಾಕುಳಂ, ನಿಝಾರ್ ಕಾಟ್ಟಿಲ್, ಬಶೀರ್ ಉಳ್ಳನಂ, ಸಲೀಂ ಪಾಲಚ್ಚಿರ, ಝುಬೈರ್ ಸಖಾಫಿ, ಉಮರ್ ಸಖಾಫಿ ಮೂರ್ಕನಾಡ್, ಹುಸನಲಿ ಕಡಲುಂಡಿ ಮುಂತಾದವರು ಭಾಗವಹಿಸಿದ್ದರು. ಸಿರಾಜ್ ಕುಟ್ಯಾಡಿ ಸ್ವಾಗತಿಸಿ, ಮುಹಮ್ಮದಲಿ ವೇಂಗರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?