ರಿಯಾದ್ : ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 4, 2021 ರಂದು ರಿಯಾದಿನಲ್ಲಿ ಮರಣ ಹೊಂದಿದ ಬಾಬು ಶಶಿಧರ ಪೂಜಾರಿಯವರ ಮೃತದೇಹವನ್ನು ನವೆಂಬರ್ 17ರಂದು ಬೇಕಾದ ದಾಖಲೆಗಳನ್ನು ಸರಿಪಡಿಸಿ ಬೆಂಗಳೂರು ಮೂಲಕ ಊರಿಗೆ ತಲುಪಿಸಲಾಯಿತು.
ಅನಾರೋಗ್ಯದಿಂದ ರಿಯಾದ್ ಸಿಮೇಶಿ ಆಸ್ಪತ್ರೆಗೆ ದಾಖಲಾಗಿದ್ದ ಬಾಬು ಶಶಿಧರ ಪೂಜಾರಿ ಎಂಬವರ ಮಾಹಿತಿ ಸಿಕ್ಕಿದ ತಕ್ಷಣ ಕಾರ್ಯಪ್ರವರ್ತರಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಸಮಿತಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ, ಅವರ ಕಫೀಲ್ ಹಾಗೂ ಕುಟುಂಬಕ್ಕೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದೆ.
ಇದಕ್ಕಾಗಿ ಮೃತ ವ್ಯಕ್ತಿಯ ಸ್ಪಾನ್ಸರ್ ಹಾಗೂ ಕೆಸಿಎಫ್ ಸಾಂತ್ವನ ಇಲಾಖೆ ನಾಯಕರಾದ ಸಲಾಂ ಹಳೆಯಂಗಡಿ, ಮಜೀದ್ ವಿಟ್ಲ, ಭಾಷಾ ಗಂಗಾವಳಿ ದಮ್ಮಾಮ್ ಝೋನ್ , ಹನೀಫ್ ಕಣ್ಣೂರು, ಯೂಸುಫ್ ಕಳಂಜಿಬೈಲ್, ನಿಝಾಂ ಸಾಗರ್, ಹಬೀಬ್ ಟಿಎಚ್ ಸಹಕರಿಸಿದರು.
ಮೃತರು ಪತ್ನಿ, ಒಂದು ಗಂಡು ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ