ರಿಯಾದ್ : ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 4, 2021 ರಂದು ರಿಯಾದಿನಲ್ಲಿ ಮರಣ ಹೊಂದಿದ ಬಾಬು ಶಶಿಧರ ಪೂಜಾರಿಯವರ ಮೃತದೇಹವನ್ನು ನವೆಂಬರ್ 17ರಂದು ಬೇಕಾದ ದಾಖಲೆಗಳನ್ನು ಸರಿಪಡಿಸಿ ಬೆಂಗಳೂರು ಮೂಲಕ ಊರಿಗೆ ತಲುಪಿಸಲಾಯಿತು.
ಅನಾರೋಗ್ಯದಿಂದ ರಿಯಾದ್ ಸಿಮೇಶಿ ಆಸ್ಪತ್ರೆಗೆ ದಾಖಲಾಗಿದ್ದ ಬಾಬು ಶಶಿಧರ ಪೂಜಾರಿ ಎಂಬವರ ಮಾಹಿತಿ ಸಿಕ್ಕಿದ ತಕ್ಷಣ ಕಾರ್ಯಪ್ರವರ್ತರಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಸಮಿತಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ, ಅವರ ಕಫೀಲ್ ಹಾಗೂ ಕುಟುಂಬಕ್ಕೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದೆ.
ಇದಕ್ಕಾಗಿ ಮೃತ ವ್ಯಕ್ತಿಯ ಸ್ಪಾನ್ಸರ್ ಹಾಗೂ ಕೆಸಿಎಫ್ ಸಾಂತ್ವನ ಇಲಾಖೆ ನಾಯಕರಾದ ಸಲಾಂ ಹಳೆಯಂಗಡಿ, ಮಜೀದ್ ವಿಟ್ಲ, ಭಾಷಾ ಗಂಗಾವಳಿ ದಮ್ಮಾಮ್ ಝೋನ್ , ಹನೀಫ್ ಕಣ್ಣೂರು, ಯೂಸುಫ್ ಕಳಂಜಿಬೈಲ್, ನಿಝಾಂ ಸಾಗರ್, ಹಬೀಬ್ ಟಿಎಚ್ ಸಹಕರಿಸಿದರು.
ಮೃತರು ಪತ್ನಿ, ಒಂದು ಗಂಡು ಎರಡು ಹೆಣ್ಣು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ