ಕೋಝಿಕ್ಕೋಡ್: ಚೇಳಾರಿ ವಿಭಾಗದ ಸಮಸ್ತ ಅಧ್ಯಕ್ಷ ಜಿಫ್ರಿ ಮುತ್ತುಕೋಯ ತಂಙಳ್, ವಕ್ಫ್ ಮಂಡಳಿಯ ನೇಮಕವನ್ನು ಪಿಎಸ್ಸಿಗೆ ಬಿಟ್ಟುಕೊಡುವ ಕುರಿತು ಮಸೀದಿಗಳಲ್ಲಿ ಪ್ರತಿಭಟನೆ ನಡೆಸಬಾರದು ಎಂದಿದ್ದಾರೆ.
ಇದು ಅಪಾಯಕಾರಿ, ಮಸ್ಜಿದ್ ಅತ್ಯಂತ ಗೌರವಾನ್ವಿತ ಸ್ಥಳವಾಗಿದೆ,ಅದು ಧರ್ಮದ ಸಂಕೇತವಾಗಿದೆ, ಮಸೀದಿಯ ಗೌರವಕ್ಕೆ ಕುಂದುಂಟಾಗುವಂಥಾ ಅಥವಾ ಅಪವಿತ್ರಗೊಳಿಸುವ ಯಾವ ಕಾರ್ಯವೂ ನಡೆಯಬಾರದು ಎಂದು ತಂಙಳ್ ಹೇಳಿದರು. ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ಇನ್ನೂ ಈ ಬಗ್ಗೆ ಪ್ರತಿಭಟನೆಯನ್ನು ಯೋಜಿಸಿಲ್ಲ. ಮಸೀದಿಗಳಲ್ಲಿ ಎಲ್ಲವನ್ನೂ ಪ್ರತಿಭಟಿಸಲು ಸಾಧ್ಯವಿಲ್ಲ ಎಂದರು.
ಅವರು ಕೋಝಿಕ್ಕೋಡ್ನಲ್ಲಿ ಮುತವಲ್ಲಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸರು ಮುಜಾಹಿದ್ದೀನ್ ಮತ್ತು ಜಮಾತ್-ಎ-ಇಸ್ಲಾಮಿ ವಿಚಾರವಾದಿಗಳನ್ನು ಸಂಪರ್ಕಿಸಿದಾಗ, ಅವರು ಮಸೀದಿಯಲ್ಲಿ ಪ್ರತಿಭಟನೆಗೆ ಕರೆ ನೀಡಿಲ್ಲ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. ಹಾಗಾದ್ರೆ, ಪ್ರತಿಭಟನಾಕಾರರು ಸುನ್ನಿಗಳು ಎಂದು ಅಂದಾಜಿಸಲಾಗುತ್ತದೆ.
ಷರಿಯಾ ಕಾನೂನಿಗೆ ವಿರುದ್ಧವಾದ ರೀತಿಯಲ್ಲಿ ವಕ್ಫ್ ಆಸ್ತಿಗಳನ್ನು ಈಗ ಹಲವೆಡೆ ನಿರ್ವಹಿಸಲಾಗುತ್ತಿದೆ.
ವಕ್ಫ್ ಸಾಧಕರು ಹೇಳಿರುವ ಪ್ರಕಾರ ಅನೇಕ ವಕ್ಫ್ ಆಸ್ತಿಗಳನ್ನು ನಿರ್ವಹಿಸಲಾಗಿಲ್ಲ. ನವೀನವಾದಿಗಳು ವಕ್ಫ್ ಮಂಡಳಿಗೆ ಬಂದಾಗ ಇಂತಹ ಅನೇಕ ಸಂಗತಿಗಳು ಸಂಭವಿಸಿದವು. ಸುನ್ನಿಗಳಿಗೆ ಸೇರಿದ ಹಲವು ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದ್ದಾರೆ. ವಕ್ಫ್ ಆಸ್ತಿ ಅತ್ಯಂತ ಪವಿತ್ರ ಆಸ್ತಿಯಾಗಿದೆ ಎಂದರು.
ವಕ್ಫ್ ಮಂಡಳಿಯ ನೇಮಕಾತಿ ಕುರಿತು ಉಂಟಾಗಿರುವ ಗೊಂದಲದ ಬಗ್ಗೆ ಚರ್ಚಿಸಲು ಸಿದ್ಧ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಅತ್ಯಂತ ಸೌಜನ್ಯಯುತವಾಗಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿದ ನಂತರವಷ್ಟೇ ಸಮಸ್ತದ ಪ್ರತಿಭಟನೆ ಬಗ್ಗೆ ತೀರ್ಮಾನಿಸಲಾಗುವುದು. ಚರ್ಚೆಯಲ್ಲಿ ಪರಿಹಾರ ಸಿಗದಿದ್ದರೆ ಮಾತ್ರ ಪ್ರತಿಭಟನೆ ನಡೆಸಲಾಗುವುದು.
ಜಿಫ್ರಿ ಮುತ್ತುಕೋಯ ತಂಙಳ್ ಅವರ ಹೇಳಿಕೆಯು, ಸಮಸ್ತ ಸೇರಿದಂತೆ ಎಲ್ಲಾ ಸಂಘಟನೆಗಳು ಮಸೀದಿಗಳಲ್ಲಿ ಪ್ರತಿಭಟಿಸುತ್ತವೆ ಎಂಬ ಮುಸ್ಲಿಂ ಲೀಗ್ನ ನಿಲುವಿಗೆ ವಿರುದ್ಧವಾಗಿದೆ. ಮಸೀದಿಗೆ ಸಂಬಂಧಿಸಿದ ವಿಷಯಗಳನ್ನು ಮಸೀದಿಯೊಳಗೆ ಚರ್ಚಿಸುವೆವು ಎಂಬ ಲೀಗ್ನ ಮತ್ತು ಇಕೆ ವಿಭಾಗದ ಕೆಲವು ನಾಯಕರ ನಿಲುವಿಗೆ ಭಾರೀ ಹಿನ್ನಡೆಯಾಗಿದೆ.
ನಾಳೆ ಮಸೀದಿಗಳಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಸುನ್ನಿಗಳು ಇರುವುದಿಲ್ಲ ಎಂಬುದು ಸ್ಪಷ್ಟವಾಗಿರುವುದರಿಂದ ಲೀಗ್ ಮುಂದೇನು ಮಾಡುತ್ತದೆ ಎಂದು ಎಲ್ಲರೂ ಕಾದು ನೋಡುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ