ಅಬುಧಾಬಿ | ಇಂಡಿಯನ್ ಗ್ರ್ಯಾಂಡ್ ಮುಫ್ತಿ(Indian Grand Mufthi) ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರಿಗೆ ಶಾಂತಿ ಪ್ರಶಸ್ತಿ ಲಭಿಸಿದೆ.
ಫೋರಂ ಫಾರ್ ಪ್ರೊಮೋಟಿಂಗ್ ಪೀಸ್ ಇನ್ ಮುಸ್ಲಿಂ ಸೊಸೈಟಿಸ್(ಮುಸ್ಲಿಂ ಸಮಾಜಗಳಲ್ಲಿ ಶಾಂತಿಯನ್ನು ಉತ್ತೇಜಿಸುವ ವೇದಿಕೆಯ) ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಶೈಖ್ ಅಬ್ದುಲ್ಲಾಹ್ ಬಿನ್ ಬಯ್ಯ ಅವರು ಅಬುಧಾಬಿಯಲ್ಲಿ ನಡೆದ 8 ನೇ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಕಾಂತಪುರಂಗೆ ಶಾಂತಿ ಪ್ರಶಸ್ತಿಯನ್ನು ನೀಡಿದರು.
ಜಾಗತಿಕವಾಗಿ ಶಾಂತಿ ಕಾಪಾಡುವಲ್ಲಿ, ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ನೀಡಿದ ಕೊಡುಗೆಗಾಗಿ ಅವರನ್ನು ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾಂತಪುರಂ ಅವರು, ಇಂದು ಮುಕ್ತಾಯಗೊಳ್ಳಲಿರುವ ಮೂರು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನದ ಮೊದಲ ಅಧಿವೇಶನದಲ್ಲಿ ‘ಜಾಗತಿಕ ಪೌರತ್ವ ನಿರ್ಮಾಣದ ಅಡಿಪಾಯ’ ಕುರಿತು ಮಾತನಾಡಲಿದ್ದಾರೆ.

ಕಳೆದ ಎರಡು ದಿನಗಳಿಂದ ವಿವಿಧ ಅಂತಾರಾಷ್ಟ್ರೀಯ ಸಮುದಾಯಗಳ ಸಹಯೋಗದಲ್ಲಿ ನಡೆಸಲಾದ ಸಮ್ಮೇಳನದಲ್ಲಿ, ಸಯೀದ್ ಇಬ್ರಾಹಿಂ ಶೈಬಿ, ಬಹ್ರೇನ್ ಸುನ್ನಿ ವಕ್ಫ್ ನ ನಿರ್ದೇಶಕ ಡಾ. ರಾಶಿದ್ ಬಿನ್ ಮೊಹಮ್ಮದ್ ಅಲ್ ಹಾಜಿರಿ, ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವ; ನೂರುಲ್ ಹಕ್ ಅಲ್ ಖಾದಿರಿ ಸೇರಿದಂತೆ ಪ್ರಪಂಚದಾದ್ಯಂತದ 200 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.
ಯುಎಇಯ ವಿದೇಶಾಂಗ ವ್ಯವಹಾರಗಳ ಸಚಿವ ಶೈಖ್ ಅಬ್ದುಲ್ಲಾಹ್ ಬಿನ್ ಝಾಯಿದ್ ಆಲ್ ನಹ್ಯಾನ್ ಮತ್ತು ಯುಎಇಯ ಫತ್ವಾ ಕೌನ್ಸಿಲ್ ಮುಖ್ಯಸ್ಥ ಶೈಖ್ ಅಬ್ದುಲ್ಲಾಹ್ ಬಿನ್ ಬಯ್ಯ ಅವರ ನೇತೃತ್ವದಲ್ಲಿ ಸಮ್ಮೇಳನ ನಡೆಯುತ್ತಿದೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ