ಉಳ್ಳಾಲ,ಡಿ.8: ಖುತುಬುಝ್ಜಮಾನ್ ಹಝ್ರತ್ ಅಸ್ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ) ತಂಙಳ್ ಅವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ ಉರೂಸ್ ನೇರ್ಚೆ ಕಾರ್ಯಕ್ರಮವನ್ನು ಎರಡು ತಿಂಗಳ ಮಟ್ಟಿಗೆ ಮುಂದೂಡಲಾಗಿದೆ.
ಅಂತಾರಾಜ್ಯ ಪ್ರಯಾಣಿಕರು ಕರ್ನಾಟಕ ಪ್ರವೇಶಕ್ಕೆ RTPCR ವರದಿಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಈ ನಿಟ್ಟಿನಲ್ಲಿ ಉರೂಸ್ ಕಾರ್ಯಕ್ರಮಕ್ಕೆ ಆಗಮಿಸುವ ಅಂತಾರಾಜ್ಯ ಪ್ರಯಾಣಿಕರಿಗೆ ತೊಡಕಾಗಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಡಿ. 23ರಿಂದ ಜ. 16ರ ವರೆಗೆ ನಡೆಯಬೇಕಾಗಿದ್ದ ಉರೂಸ್ ಕಾರ್ಯಕ್ರಮವನ್ನು ಮುಂದೂಡುವಂತೆ ಸಲಹೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಉಳ್ಳಾಲ ದರ್ಗಾ ಮತ್ತು ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್, ಮುಂದಿನ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡು ಹೆಚ್ಚಿನ ಮಾಹಿತಿಯನ್ನು ನೀಡಲಾಗುವುದು ಎಂದಿದ್ದಾರೆ. ವೀಡಿಯೋ
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ