janadhvani

Kannada Online News Paper

ಎಸ್ಡಿಪಿಐ ಕೋಟೆಕಾರ್ ಪಟ್ಟಣ ಪಂಚಾಯತ್ ಚುನಾವಣಾ ಸಿದ್ಧತಾ ಸಭೆ

ಕೋಟೆಕಾರ್,ಡಿ.9: ಕೋಟೆಕಾರ್ ಪಟ್ಟಣ ಪಂಚಾಯತ್ ಚುನಾವಣೆಯ ಕುರಿತಂತೆ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ( SDPI ) ಚುನಾವಣಾ ಸಿದ್ಧತಾ ಪೂರ್ವಭಾವಿ ಸಭೆ ಇಂದು ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪನೀರ್ ನಲ್ಲಿ ನಡೆಯಿತು.

ಸಭೆಯಲ್ಲಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಕೋಶಾಧಿಕಾರಿ ಇಕ್ಬಾಲ್ ಐಎಂಆರ್, ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ಕೆಸಿ ರೋಡ್, ಝಾಕಿರ್ ಉಳ್ಳಾಲ್ , ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಅಶ್ರಫ್ ಮಂಚಿ ಸೇರಿದಂತೆ,ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಬ್ಲಾಕ್ ಗಳ ಅಧ್ಯಕ್ಷ ಕಾರ್ಯದರ್ಶಿಗಳು ಪಾಲ್ಗೊಂಡರು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ವಹಿಸಿದ್ದರೆ ಕಾರ್ಯದರ್ಶಿ ಝಾಹಿದ್ ಮಲಾರ್ ಸಭೆಯಲ್ಲಿ ಪಕ್ಷದ ಚುನಾವಣಾ ಸಿದ್ಧತಾ ವಿವರ ಮಂಡಿಸಿದರು.