ರಿಯಾದ್: ಇಸ್ಲಾಮಿಕ್ ಸಂಘಟನೆಯಾದ ತಬ್ಲಿಘಿ ಜಮಾತ್ ಅನ್ನು ಸೌದಿ ಅರೇಬಿಯಾ ನಿಷೇಧಿಸಿದೆ. “ಭಯೋತ್ಪಾದನೆಯ ಹೆಬ್ಬಾಗಿಲುಗಳಲ್ಲಿ ಒಂದಾಗಿದೆ” ಎಂದು ಕರೆದಿರುವ ಈ ಗುಂಪನ್ನು ಕಾರ್ಯನಿರ್ವಹಿಸದಂತೆ ನಿಷೇಧಿಸಿದೆ.
ತಬ್ಲೀಗ್ ಜಮಾಅತ್ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಶುಕ್ರವಾರ ಮಸೀದಿಗಳಲ್ಲಿ ಧರ್ಮೋಪದೇಶವನ್ನು ನೀಡುವಂತೆ ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವರಾದ ಡಾ. ಅಬ್ದುಲ್ಲತೀಫ್ ಆಲ್-ಶೈಖ್ ಈ ಹಿಂದೆ ಸೂಚನೆ ನೀಡಿದ್ದರು.
ತಬ್ಲೀಗ್ ಗುಂಪಿನ ಚಟುವಟಿಕೆಗಳು, ಪ್ರವಾದಿವರ್ಯರ ಆದರ್ಶಕ್ಕೆ ವಿರುದ್ಧವೂ, ಸಮೂಹವನ್ನು ತಪ್ಪುದಾರಿಗೆಳೆಯುತ್ತಿರುವುದೂ, ಅಪಾಯಕಾರಿಯೂ ಆಗಿದೆ. ಇದು ಭಯೋತ್ಪಾದನೆಯ ಹೆಬ್ಬಾಗಿಲುಗಳಲ್ಲಿ ಒಂದಾಗಿದೆ ಎಂದು ಸಚಿವಾಲಯ ಹೇಳಿದೆ. ಇಂತಹ ಗುಂಪುಗಳೊಂದಿಗಿನ ಸಂಪರ್ಕವನ್ನು ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
1926 ರಲ್ಲಿ ಭಾರತದ ಮೇವಾತ್ ಪ್ರದೇಶದಲ್ಲಿ, ಮುಹಮ್ಮದ್ ಇಲ್ಯಾಸ್ ಅಲ್-ಕಂಧ್ಲಾವಿ ಎಂಬವರಿಂದ ಸ್ಥಾಪನೆಯಾದ ತಬ್ಲೀಘಿ ಜಮಾಅತ್, ನವೀನ ಸಿದ್ಧಾಂತಗಳ ಇಸ್ಲಾಮಿಕ್ ಮಿಷನರಿ ಚಳುವಳಿಯಾಗಿದೆ. ತನ್ನದ್ದು ಅಹ್ಲೇ ಹದೀಸ್ ಅಥವಾ ಸಲಫಿ ಆದರ್ಶವಾಗಿದೆ ಎಂದು ಅದರ ವಕ್ತಾರರು ವ್ಯಕ್ತಪಡಿಸಿದ್ದರು.
ಭಾರತ ಸಹಿತ ವಿಶ್ವಾದ್ಯಂತವಿರುವ ಸುನ್ನೀ ಉಲಮಾಗಳು ತಬ್ಲೀಗ್ ಜಮಾಅತ್ ನ್ನು ಆರಂಭದಿಂದಲೇ ವಿರೋಧಿಸುತ್ತಾ ಬಂದಿರುವುದು ಗಮನಾರ್ಹ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ