ಮಂಗಳೂರು: ಖಾಸಗಿ ಬಸ್ನಲ್ಲಿ ಜತೆಯಾಗಿ ಪ್ರಯಾಣಿತ್ತಿದ್ದ ಭಿನ್ನ ಕೋಮಿನ ಯುವಕ ಮತ್ತು ಯುವತಿಯನ್ನು ಬೆದರಿಸಿ, ಅವ್ಯಾಚ ಶಬ್ದಗಳಿಂದ ಬೈದು ಅಲ್ಲದೇ ಅವರ ಭಾವಚಿತ್ರ ಹಾಗೂ ವೀಡಿಯೋ ಕ್ಲಿಪ್ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚುವ ಮೂಲಕ ಯುವತಿಯ ಗೌರವಕ್ಕೆ ದಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಬಸ್ಸು ನಿಲ್ದಾಣದಲ್ಲಿ ನಡೆದಿದೆ ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಭಂದಿಸಿದಂತೆ , ಅನ್ಯಮತೀಯ ಯುವಕ ಮತ್ತು ಯುವತಿಯ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದರು.
ಉಡುಪಿ ಜಿಲ್ಲೆಯ ಬಸ್ಸು ನಿಲ್ದಾಣದಲ್ಲಿ ಮಂಗಳೂರು ನಗರದ ಕಾಲೇಜ್ ಒಂದರ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಅಡ್ಡ ಹಾಕಿ ಗದರಿಸಲಾಗಿತ್ತು ಎಂದು ವಿಡಿಯೋ ಹಾಗೂ ಅದಕ್ಕೆ ಸಂಬಂಧಿಸಿದ ಪೋಸ್ಟ್ ಶುಕ್ರವಾರ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗಿತ್ತು .
ಈ ವಿಡಿಯೋ ಹಾಗೂ ಇದೇ ಘಟನೆಗೆ ಸಂಬಂದಿಸಿದ ಇನ್ನೆರಡು ವಿಡೀಯೊಗಳ ಪರಿಶೀಲನೆ ನಡೆಸಿದ ಮಂಗಳೂರು ಪೊಲೀಸರು ಪ್ರಸ್ತುತ ಘಟನೆಯು ಮಂಗಳೂರಿನ ಖಾಸಗಿ ಬಸ್ಸು ನಿಲ್ದಾಣದ ಬಳಿ ನಡೆದಿತ್ತು ಎನ್ನುವುದನ್ನು ಕಂಡು ಕೊಂಡಿದ್ದರು.
ಈ ಹಿನ್ನಲೆಯಲ್ಲಿ ಸೋಮೋಟೋ ಪ್ರಕರಣ ದಾಖಲಿಸಿಕೊಂಡ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು .ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ್ , ರಾಘವೇಂದ್ರ, ರಂಜೀತ್ ಹಾಗೂ ಪವನ್ ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ದ ಐಪಿಸಿ ಕಲಂ 153 ಎ ಹಾಗೂ 354 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕೃತ್ಯವು ಉಡುಪಿಯಲ್ಲಿ ನಡೆದಿದೆ ಎಂಬ ಮಾಹಿತಿಯೂ ವ್ಯಾಪಕವಾಗಿ ಹಬ್ಬಿದ ಹಿನ್ನಲೆಯಲ್ಲಿ ಉಡುಪಿ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬಹುದು ಎಂಬ ಉದ್ದೇಶದಿಂದ ಮಂಗಳೂರು ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿರಲಿಲ್ಲ. ಆದರೆ ಕೃತ್ಯ ಮಂಗಳೂರು ಖಾಸಗಿ ಬಸ್ಸು ನಿಲ್ದಾಣದಲ್ಲಿ ನಡೆದಿದೆ ಎಂಬ ಮಾಹಿತಿ ತಿಳಿಯುತ್ತಲೇ ಪೊಲೀಸರೇ ಸೊಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ