janadhvani

Kannada Online News Paper

ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್- ಆರೋಪಿ ಟಿ.ಕೆ.ವಸಂತ್ ಕುಮಾರ್ ಬಂಧನ

ರಾವತ್ ಅವರನ್ನು ಸಾವಿನ ಕುರಿತು ಆಕ್ಷೇಪಾರ್ಹ ಸ್ಟೇಟಸ್ ಪೋಸ್ಟ್ ಮಾಡಿದ್ದವರ ಪೈಕಿ ನಿನ್ನೆ ಮಧ್ಯಪ್ರದೇಶ ಮತ್ತು ಗುಜರಾತ್ನಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿತ್ತು.

ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಅವ್ರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಟಿ.ಕೆ.ವಸಂತ್ ಕುಮಾರ್ (40) ನಗರದ ಖಾಸಗಿ ಲ್ಯಾಬ್ʼನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಕಾರ್ಯ ನಿರ್ವಹಿಸುತ್ತಿದ್ದಾನೆ.ಇನ್ನು ಈತನ ವಿರುದ್ಧ ಐಪಿಸಿ ಸೆಕ್ಷನ್ 505ರಡಿ ಎಫ್ ಐಆರ್ ದಾಖಲಿಸಲಾಗಿದೆ.

ಮೈಸೂರು ಮೂಲದ ಆರೋಪಿ, ಬಿಪಿನ್ ರಾವತ್ ಅವ್ರ ಸಾವನ್ನ ಸಂಭ್ರಮಿಸಿ ಫೇಸ್ ಬುಕ್ʼನಲ್ಲಿ ಪೋಸ್ಟ್‌ ಹಾಕಿದ್ದ. ಈತ ‘ಬಿಪಿನ್ ರಾವತ್, ಮೋದಿ ಗುಲಾಮತನದ ಒಂದು ತಲೆಮಾರು’, ‘ಚೀನಾ ಭಾರತ ಗಡಿಯಲ್ಲಿ ಬಂದು ಹಳ್ಳಿಗಳನ್ನ‌ ನಿರ್ಮಿಸಿದಾಗ ಮೋದಿಯಂತೆ ಬುಡಬುಡಿಕೆ ಹೇಳಿಕೆ ಕೊಟ್ಟ ವ್ಯಕ್ತಿ, ರಾವತ್ ಸಾವಿನಿಂದ ದೇಶವಂತೂ ಪಾರಾಗಿದೆ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ. ಈ ಕುರಿತು ಒಂದು ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿದ್ದು, ಸಧ್ಯ ಈ ಲ್ಯಾಬ್ ಟೆಕ್ನಿಷಿಯನ್ʼನನ್ನ ಪೊಲೀಸರು ಬಂಧಿಸಿದ್ದಾರೆ.

ರಾವತ್ ಅವರನ್ನು ಸಾವಿನ ಕುರಿತು ಆಕ್ಷೇಪಾರ್ಹ ಸ್ಟೇಟಸ್ ಪೋಸ್ಟ್ ಮಾಡಿದ್ದವರ ಪೈಕಿ ನಿನ್ನೆ ಮಧ್ಯಪ್ರದೇಶ ಮತ್ತು ಗುಜರಾತ್ನಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿತ್ತು. ಹಾಗೆಯೇ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕರ್ನಾಟಕದ ಟಿ.ಕೆ. ವಸಂತಕುಮಾರ್, ಸುಬ್ಬರಾವ್ ರವಿಕುಮಾರ್ ಅವರು ರಾವತ್ ವಿರುದ್ಧ ಹಾಗೂ ಶ್ರೀನಿವಾಸ ಕಾರ್ಕಳ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್ ದೋವಲ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ಇವರೆಲ್ಲರ ವಿರುದ್ಧ ದೂರು ದಾಖಲಾಗಿತ್ತು.