ಬೆಂಗಳೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಅವ್ರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಟಿ.ಕೆ.ವಸಂತ್ ಕುಮಾರ್ (40) ನಗರದ ಖಾಸಗಿ ಲ್ಯಾಬ್ʼನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಕಾರ್ಯ ನಿರ್ವಹಿಸುತ್ತಿದ್ದಾನೆ.ಇನ್ನು ಈತನ ವಿರುದ್ಧ ಐಪಿಸಿ ಸೆಕ್ಷನ್ 505ರಡಿ ಎಫ್ ಐಆರ್ ದಾಖಲಿಸಲಾಗಿದೆ.
ಮೈಸೂರು ಮೂಲದ ಆರೋಪಿ, ಬಿಪಿನ್ ರಾವತ್ ಅವ್ರ ಸಾವನ್ನ ಸಂಭ್ರಮಿಸಿ ಫೇಸ್ ಬುಕ್ʼನಲ್ಲಿ ಪೋಸ್ಟ್ ಹಾಕಿದ್ದ. ಈತ ‘ಬಿಪಿನ್ ರಾವತ್, ಮೋದಿ ಗುಲಾಮತನದ ಒಂದು ತಲೆಮಾರು’, ‘ಚೀನಾ ಭಾರತ ಗಡಿಯಲ್ಲಿ ಬಂದು ಹಳ್ಳಿಗಳನ್ನ ನಿರ್ಮಿಸಿದಾಗ ಮೋದಿಯಂತೆ ಬುಡಬುಡಿಕೆ ಹೇಳಿಕೆ ಕೊಟ್ಟ ವ್ಯಕ್ತಿ, ರಾವತ್ ಸಾವಿನಿಂದ ದೇಶವಂತೂ ಪಾರಾಗಿದೆ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದ. ಈ ಕುರಿತು ಒಂದು ಪ್ರಕರಣ ಮಂಗಳೂರಿನಲ್ಲಿ ದಾಖಲಾಗಿದ್ದು, ಸಧ್ಯ ಈ ಲ್ಯಾಬ್ ಟೆಕ್ನಿಷಿಯನ್ʼನನ್ನ ಪೊಲೀಸರು ಬಂಧಿಸಿದ್ದಾರೆ.
ರಾವತ್ ಅವರನ್ನು ಸಾವಿನ ಕುರಿತು ಆಕ್ಷೇಪಾರ್ಹ ಸ್ಟೇಟಸ್ ಪೋಸ್ಟ್ ಮಾಡಿದ್ದವರ ಪೈಕಿ ನಿನ್ನೆ ಮಧ್ಯಪ್ರದೇಶ ಮತ್ತು ಗುಜರಾತ್ನಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿತ್ತು. ಹಾಗೆಯೇ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕರ್ನಾಟಕದ ಟಿ.ಕೆ. ವಸಂತಕುಮಾರ್, ಸುಬ್ಬರಾವ್ ರವಿಕುಮಾರ್ ಅವರು ರಾವತ್ ವಿರುದ್ಧ ಹಾಗೂ ಶ್ರೀನಿವಾಸ ಕಾರ್ಕಳ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹಾಗಾರ ಅಜಿತ್ ದೋವಲ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದು, ಇವರೆಲ್ಲರ ವಿರುದ್ಧ ದೂರು ದಾಖಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ