janadhvani

Kannada Online News Paper

ಕೆಲವು ತಪ್ಪುಗಳು ಸಂಭವಿಸಿರಬಹುದು , ಆದರೆ ಕೇಂದ್ರದ ಉದ್ದೇಶವೇ ತಪ್ಪು ಎಂದು ಹೇಳಲಾಗದು- ಅಮಿತ್ ಶಾ

ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ಬಹಳಷ್ಟು ಬದಲಾವಣೆಗಳಾಗಿರುವುದನ್ನು ವಿಮರ್ಶಕರು ಸಹ ಒಪ್ಪಿಕೊಳ್ಳುತ್ತಾರೆ. ನಮ್ಮ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಬಂದಿಲ್ಲ.

ನವದೆಹಲಿ, ಡಿ.17: ಕೇಂದ್ರ ಸರ್ಕಾರವು ಕೆಲವು ತಪ್ಪುಗಳನ್ನು ಮಾಡಿರಬಹುದು. ಆದರೆ ಕೇಂದ್ರದ ಉದ್ದೇಶವೇ ತಪ್ಪು ಎಂದು ಹೇಳಲಾಗದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿಯಲ್ಲಿ ಜರುಗಿದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ (ಎಫ್‍ಐಸಿಸಿಐ) 94ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು

ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ಬಹಳಷ್ಟು ಬದಲಾವಣೆಗಳಾಗಿರುವುದನ್ನು ವಿಮರ್ಶಕರು ಸಹ ಒಪ್ಪಿಕೊಳ್ಳುತ್ತಾರೆ. ನಮ್ಮ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಬಂದಿಲ್ಲ. ಕೆಲವು ತಪ್ಪು ನಿರ್ಧಾರ ಕೈಗೊಂಡಿರಬಹು. ಆದರೆ ನಮ್ಮ ಉದ್ದೇಶವೇ ತಪ್ಪು ಎಂದು ಯಾರೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಪುನಃ ಸ್ಥಾಪಿಸಿದ್ದಾರೆ ಎಂದು ಶಾ ಹೇಳಿದರು. ಮೋದಿ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳಲು ಪ್ರಾರಂಭಿಸಿದರು. ನಮ್ಮ ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯು ವಿಫಲವಾಗುತ್ತಿದೆಯೇ ಎಂದು ದೇಶವು ಆಶ್ಚರ್ಯ ಪಡುತ್ತಿತ್ತು. ನಮ್ಮ ಸರ್ಕಾರದ ದೊಡ್ಡ ಸಾಧನೆ ಎಂದರೆ ಪ್ರಧಾನಿ ಮೋದಿಯವರು ನಮ್ಮ ಬಹುಪಕ್ಷದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ನಂಬಿಕೆಯನ್ನು ಬಲಪಡಿಸಿದ್ದಾರೆ ಎಂದರು.