ಬೆಂಗಳೂರು,ಡಿ.23: ಕೆಲ ದಿನಗಳ ಹಿಂದೆ ಇಲ್ಲಿನ ಕೆಲವು ಮಸಿದಿಗಳಿಂದ ಪೋಲೀಸರು ಧ್ವನಿ ವರ್ಧಕಗಳನ್ನು ತೆರವುಗೊಳಿಸಿದ್ದರು. ಈ ಬಗ್ಗೆ ಹಲವಾರು ದೂರು ಲಭಿಸಿದ ಹಿನ್ನೆಲೆಯಲ್ಲಿ ರಾಜ್ಯ ವಖ್ಫ್ ಬೋರ್ಡ್ ಕೂಡಲೇ ಸ್ಪಂದಿಸಿದೆ.
ಮುಂಚಿತವಾಗಿ ಯಾವುದೇ ಮಾಹಿತಿ, ನೋಟೀಸ್ ನೀಡದೆ ಪೋಲಿಸ್ನವರು ಮಸೀದಿಗಳಿಗೆ ಅಕ್ರಮ ಪ್ರವೇಶಿಸಿ ಧ್ವನಿವರ್ಧಕ ತೆಗೆದ ವಿಷಯ ಸಂಭಂದಿಸಿ, “ಇನ್ನು ಯಾವುದೇ ಮಸೀದಿಯ ಧ್ವನಿವರ್ಧಕ ತೆಗೆಯಬಾರದು. ತೆಗೆಯಲಾದ ಧ್ವನಿ ವರ್ಧಕಗಳನ್ನು ತಕ್ಷಣ ಪುನರ್ ಸ್ಥಾಪಿಸಬೇಕು” ಎಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿಯವರ ನೇತ್ರತ್ವದ ವಕ್ಫ್ ಮಂಡಳಿ ಪತ್ರ ಮೂಲಕ ಖಡಕ್ ಆದೇಶ ನೀಡಿದೆ.
ಇದರನ್ವಯ ವಶ ಪಡಿಸಲಾದ ಮಸೀದಿಯ ಮೈಕ್ಗಳನ್ನು ಪುನ ಸ್ಥಾಪಿಸಲು ಪೋಲಿಸರು ಒಪ್ಪಿದ್ದಾರೆ. ಸಿದ್ದಾಪುರದ ಎಲ್ಲಾ ಮಸೀದಿಗಳ ಸಮಿತಿ ಮತ್ತು ಜಯನಗರ ಮುಸ್ಲಿಮ್ ಸಂಘಟನೆಗಳ ಸಮಿತಿ ಈ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿತ್ತು.ಪೊಲೀಸರಿಗೆ ತಮ್ಮ ತಪ್ಪಿನ ಅರಿವಾಗಿದ್ದು, ಮೈಕ್ ಗಳನ್ನು ವಾಪಾಸ್ ಕೊಡುವುದಾಗಿ ಹೇಳಿದ್ದಾರೆ.
ವದಂತಿಗಳಿಗೆ ಕಿವಿಗೊಡದೆ ಜನರು ಶಾಂತಿ ಕಾಪಾಡಬೇಕೆಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಉಸ್ತಾದ್ ಜನರಿಗೆ ಮನವಿ ಮಾಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ