ಕೋಝಿಕ್ಕೋಡ್,ಡಿ.28| ಸಮಸ್ತ ಅಧ್ಯಕ್ಷ ಜಿಫ್ರಿ ಮುತ್ತುಕೋಯ ತಂಙಳರಿಗೆ ಅವರ ಜೀವ ಬೆದರಿಕೆ ಸಂಬಂಧಿತ ಹೇಳಿಕೆಗೆ ಸಚಿವ ವಿ ಅಬ್ದುರಹ್ಮಾನ್ ಪ್ರತಿಕ್ರಿಯಿಸಿದ್ದಾರೆ. ಅಗತ್ಯಬಿದ್ದರೆ ಪೊಲೀಸ್ ರಕ್ಷಣೆ ನೀಡುವುದಾಗಿ ಹಾಗೂ ಸರ್ಕಾರದ ಎಲ್ಲ ಬೆಂಬಲವೂ ತಮಗಿದೆ ಎಂದು ಸಚಿವರು ಹೇಳಿದರು. ತಂಙಳರಿಗೆ ದೂರವಾಣಿ ಕರೆ ಮಾಡಿ ಸಚಿವರು ಸರ್ಕಾರಿ ಭದ್ರತೆಯ ಭರವಸೆ ನೀಡಿದರು.
ಆದರೆ, ಈಗ ಭದ್ರತೆ ಬೇಕಿಲ್ಲ ಎಂದು ತಂಙಳ್ ಸಚಿವರಿಗೆ ತಿಳಿಸಿದರು. ಕೆಲ ದಿನಗಳ ಹಿಂದೆ ಬೆದರಿಕೆ ಹಾಕಲಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಜಿಫ್ರಿ ಮುತ್ತುಕೋಯ ತಂಙಳ್ ಅವರು ಸಚಿವರಿಗೆ ತಿಳಿಸಿದರು.
ಮಲಪ್ಪುರಂನ ಆನಕ್ಕಯಂ ಎಂಬಲ್ಲಿ ಸಮಸ್ತದ ಅಧೀನದ ಕಾಲೇಜಿನಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ತಂಙಳ್ ರು ತಮಗೆ ಬೆದರಿಕೆಯ ಕರೆ ಬಂದ ಬಗ್ಗೆ ಬಹಿರಂಗಪಡಿಸಿದ್ದರು. ಚೆಂಬರಿಕ ಖಾಝಿಯವರ ಅನುಭವ ಉಂಟಾಗಲಿದೆ ಎಂದು ಅನಾಮಿಕ ಕರೆ ಬಂದಿತ್ತು ಎಂದ ತಂಙಳ್, ನಾನು ಯಾವುದೇ ಬೆದರಿಕೆಗೆ,ದಿಟ್ಟ ನಿಲುವಿನಿಂದ ಹಿಂದೆ ಸರಿಯುವವನಲ್ಲ ಎಂದು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ