ಮಂಗಳೂರು: ನಗರದ ಮಾರ್ನಮಿಕಟ್ಟೆಯ ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ನ್ನು ಇಟ್ಟು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೇವದಾಸ್ ದೇಸಾಯಿ(62) ಎಂದು ಗುರುತಿಸಲಾಗಿದ್ದು, ಮಿತ್ರ ನಗರ, ಕೊಂಡಾಣ ಕೋಟೇಕಾರು ನಿವಾಸಿಯಾಗಿದ್ದಾನೆಂದು ತಿಳಿದು ಬಂದಿದೆ.
ಆರೋಪಿ ಈ ಹಿಂದೆಯೂ ಹಲವು ದೇವಸ್ಥಾನ, ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಕೆಳಕಂಡ ಸ್ಥಳಗಳಲ್ಲಿನ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಸಿಖ್ ಗುರುದ್ವಾರ( ಕೂಳೂರು) ಮುಂತಾದ ಕಡೆಗಳಲ್ಲಿನ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಆರೋಪಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಧಾರ್ಮಿಕ ಕೃತಿಗಳ ಮೂಲಕ ಧರ್ಮ ಪ್ರಚಾರ ನಡೆಸುತ್ತಿದ್ದ ಎಂದು
1. ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ
2. ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ
3. ಕೊಂಡಾಣ ದೈವಸ್ಥಾನ
4. ಮಂಗಳಾದೇವಿ ದೇವಸ್ಥಾನ
5. ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ
6. ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ
7. ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ
8. ಕಲ್ಲಾಫು ನಾಗನ ಕಟ್ಟೆ
9. ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ
10. ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ
11. ಕುತ್ತಾರು ಕೊರಗಜ್ಜನ ಕಟ್ಟೆ
12. ಕುಡುಪು ದೈವಸ್ಥಾನ
13. ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ
14. ನಂದಿಗುಡ್ಡೆಯ ಕೊರಗಜ್ಜನ ಗುಡಿ
15. ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ
16. ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು
17. ಕೋಟ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್
18. ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು
1997 ನೇ ಇಸವಿಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿರುವ ದೇಸಾಯಿ ಮಂಗಳೂರಿನ ಬಂದರಿನ ವಿ.ಆರ್.ಎಲ್. ಟ್ರಾನ್ಸ್ ಪೋರ್ಟ್ ಕಚೇರಿಯಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಆ ಸಮಯ ಸುರತ್ಕಲ್ ಸೂರಿಂಜೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ. ಆತನ ಹೆಂಡತಿ ಹಾಗೂ ಮಗಳು ಹುಬ್ಬಳ್ಳಿಯ ಮನೆಯಲ್ಲಿದ್ದವರು ಅತ್ತಿಗೆಯ ಜೊತೆಗೆ ಮನಸ್ತಾಪ ಮಾಡಿಕೊಂಡು ಅವಳ ಸ್ವಂತ ಊರಾದ ಚಿಕ್ಕಮಗಳೂರಿಗೆ ಹೋದವರು ನಂತರ ಪತಿ ದೇಸಾಯಿಯನ್ನು ದೂರ ಮಾಡಿದ್ದರು.
2006 ನೇ ಇಸವಿಯಲ್ಲಿ ತಲಪಾಡಿ ಕೆ.ಸಿ. ರೋಡ್ ಬಳಿ ಅಂತೋನಿ ರಾಜ್ ಎಂಬವರ ಮನೆಯನ್ನು ಖರೀದಿ ಮಾಡಿದ್ದು, ಪ್ರಸ್ತುತ ಇದೇ ಮನೆಯಲ್ಲಿ ಒಬ್ಬಂಟಿಯಾಗಿ ವಾಸಮಾಡಿಕೊಂಡಿದ್ದಾನೆ. ಸರಿಯಾದ ಕೆಲಸವಿಲ್ಲದೆ ಗುಜಿರಿ ಪೇಪರ್ ಬಾಕ್ಸ್ ಗಳನ್ನು ಮಾರಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿರುವುದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.
ಕೃತ್ಯದ ಬಗ್ಗೆ ಪಶ್ಚಾತ್ತಾಪವಿಲ್ಲ ಎಂದ ಆರೋಪಿ
ಬೈಬಲ್ ನಲ್ಲಿ ಜಗತ್ತಿನ ಅಂತ್ಯದ ಬಗ್ಗೆ ವಿವರಿಸಿದೆ. ದೇವರು ದುರಾತ್ಮಗಳನ್ನು ಹೊರ ತಳ್ಳಿದ್ದಾನೆ. ಅದನ್ನು ಅನಾದಿ ಕಾಲದಿಂದ ಭೂಮಿಯಲ್ಲಿ ಆರಾಧಿಸಲಾಗುತ್ತಿದೆ. ಜಗತ್ತಿನ ಅಂತ್ಯದ ಸಮಯಕ್ಕೆ ಮುಕ್ತಿ ಹೊಂದಬೇಕಾದರೆ ಏಸುನನ್ನು ಆರಾಧಿಸಬೇಕು. ಹಾಗಾಗಿ ಅಶುದ್ಧಿಯ ತಾಣಗಳಿಗೆ ಅಶುದ್ಧಿಯೇ ಕಾಣಿಕೆಯಾಗಿದೆ. ಆದ್ದರಿಂದ ಅಲ್ಲಲ್ಲಿ ಸಿಕ್ಕ ಬಳಸಿದ ಕಾಂಡೋಮ್ ಹಾಕುತ್ತಿದ್ದೆ ಎಂದು ಆರೋಪಿ ತನ್ನ ಕೃತ್ಯದ ಬಗ್ಗೆ ವಿವರಿಸಿದ್ದಾನೆ.
ನಾನು ಮಾಡಿರುವ ಕೃತ್ಯದ ಬಗ್ಗೆ ಪಶ್ಚಾತ್ತಾಪವಿಲ್ಲ. ಹಿಂದೆ ಬರಹದ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದೆ. ಈಗ ಕಾಂಡೋಮ್ ಮೂಲಕ ಮೂರ್ತಿಗಳನ್ನು ಅವಮಾನಿಸುತ್ತಿದ್ದೇನೆ. ದೇವರು ದುರಾತ್ಮಗಳನ್ನು ಅವಮಾನಿಸಲೆಂದೇ ಕಾಂಡೋಮ್ ಹಾಕಿದ್ದೇನೆ. ಬೈಬಲ್ ನಲ್ಲಿ ಏಸು ಕ್ರಿಸ್ತ ಈ ಕುರಿತು ವಿವರಿಸಿದ್ದಾನೆ ಎಂದು ಆರೋಪಿ ದೇವದಾಸ ದೇಸಾಯಿ ಸ್ಫೋಟಕ ಹೇಳಿಕೆ ನೀಡಿದ್ದಾನೆ.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ