ಬೆಂಗಳೂರು: ಕನ್ನಡ ಬಾವುಟ ಸುಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ನಾಳೆ ಡಿ.31ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಅನ್ನು ವಾಟಾಳ್ ನಾಗರಾಜ್ ಹಿಂಪಡೆದಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಮನವೊಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್, ನಾಳೆ ನಡೆಯಬೇಕಾಗಿದ್ದ ಬಂದ್ ಇರಲ್ಲ. ಸಿಎಂ ಭರವಸೆ ಹಿನ್ನೆಲೆ ನಾಳೆಯ ಬಂದ್ ವಾಪಾಸ್ ಪಡೆದಿರೋದಾಗಿ ತಿಳಿಸಿದರು.
ನಾಳೆ ಬಂದ್ ಇಲ್ಲ, ಬೆಂಗಳೂರಿನಲ್ಲಿ ಪ್ರತಿಭಟನೆ ಇರುತ್ತೆ. ಜನವರಿ 22ರಂದು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಕನ್ನಡಪರ ಸಂಘಟನೆಯ ಒಕ್ಕೂಟದ ಸದಸ್ಯರು ಜ.22ರಂದು ಬಂದ್ ಮಾಡಲು ಒಮ್ಮತದ ನಿರ್ಧಾರ ಮಾಡಿದ್ದಾರೆ. ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್, ಕುಮಾರ್ ಒಕ್ಕೂಟದ ಸದಸ್ಯರು ಒಮ್ಮತದ ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದೇ ಹೋದಲ್ಲಿ ಜನವರಿ 22ರಂದು ಬಂದ್ ಮಾಡಲು ನಿರ್ಧರಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಸಿಎಂ ಮನವೊಲಿಕೆ ಸಕ್ಸಸ್
ಸಿಎಂ ಎರಡು ಬಾರಿ ಮನವಿ ಮಾಡಿದ್ರು, ಇಂದು ಸಿಎಂ ಗೃಹಕಚೇರಿ ಕೃಷ್ಣಾಗೆ ಕರೆಸಿ ಮಾತಾಡಿದ್ರು. ಎಂಇಎಸ್ ನಿಷೇಧಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಬಂದ್ ಹಿಂದೆ ಪಡೆಯಿರಿ ಎಂದು ಸಿಎಂ ಮನವಿ ಮಾಡಿದರು. ಸಿಎಂ ಮನವಿಗೆ ಗೌರವ ಕೊಡಲು ನಿರ್ಧಾರ ಮಾಡಲಾಗಿದೆ. ಒಕ್ಕೂಟದ ಮುಖಂಡರು ಎಲ್ಲರೂ ನಾಳೆ ಬಂದ್ ಮಾಡಿದ್ರೆ ಹೊಸ ವರುಷಕ್ಕೆ ತೊಂದರೆ ಆಗುತ್ತೆ ಎಂದು ಬಂದ್ ಮುಂದೂಡಲು ಒತ್ತಡ ಹೇರಿದ್ದರು. ನನ್ನ ಜೀವನದಲ್ಲಿ ಈ ರೀತಿ ಒತ್ತಡ ಎಂದೂ ಬಂದಿದ್ದಿಲ್ಲ. ಹೀಗಾಗಿ ಬಂದ್ ವಾಪಸ್ ಪಡೆದಿರೋದಾಗಿ ವಾಟಾಳ್ ಸ್ಪಷ್ಟನೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ