ಚಿಕ್ಕಮಗಳೂರು:-ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂವನ್ನು ಮುಂದುವರೆ ಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾತ್ರಿ ಕಫ್ರ್ಯೂವನ್ನು ಜಾರಿಗೊಳಿಸಲಾಗುತ್ತಿದೆ.
ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಯಲಿದೆ. ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು ಎಂದರು.
ಸದ್ಯಕ್ಕೆ ಲಾಕ್ಡೌನ್ ಮಾಡುವ ಉದ್ದೇಶ ಇಲ್ಲ. ಅನಿವಾರ್ಯವಾದರೆ ಮಾಡಬೇಕಾಗಬಹುದು. ಜನರ ಜೀವ ಉಳಿಸಲು ಆರ್ಥಿಕಾಭಿವೃದ್ಧಿ ಮತ್ತು ಶಾಲಾ -ಕಾಲೇಜು ಬಂದ್ ಮಾಡಬೇಕಾಗಬಹುದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್ ನಿಯಮಗಳನ್ನು ಮುರಿಯದೆ ಸ್ವಯಂ ಅನುಸರಿಸಬೇಕು ಎಂದು ಹೇಳಿದರು.
ಸಾರ್ವಜನಿಕರ ಸಹಕಾರ ಸೂಕ್ತ ರೀತಿಯಲ್ಲಿ ದೊರೆಯದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು. ಈಗಾಗಲೇ ಮಾಸ್ಕ್ ಧರಿಸದೆ ಓಡಾಟ ಮಾಡುವುದು ಕಂಡು ಬರುತ್ತಿದೆ. ಮದುವೆ ಮೊದಲಾದ ಕಾರ್ಯಕ್ರಮಗಳಿಗೆ ಸಾವಿರಾರು ಜನ ಸೇರುತ್ತಿದ್ದಾರೆ. ಇದು ಸೋಂಕು ಹರಡಲು ಎಡೆಮಾಡಿಕೊಡಬಹುದು. ಈಗಾಗಲೇ ಕೋವಿಡ್ 2ನೇ ಅಲೆಯಲ್ಲಿ ಉಂಟಾದ ಸಾವು-ನೋವುಗಳು ನಮ್ಮ ನೆನಪಿನಲ್ಲಿವೆ. ಅದಕ್ಕೆ ಅವಕಾಶ ಕೊಡದಂತೆ ತಡೆಯುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ