ಚಿಕ್ಕಮಗಳೂರು:-ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕಫ್ರ್ಯೂವನ್ನು ಮುಂದುವರೆ ಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾತ್ರಿ ಕಫ್ರ್ಯೂವನ್ನು ಜಾರಿಗೊಳಿಸಲಾಗುತ್ತಿದೆ.
ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಯಲಿದೆ. ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಿ, ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು ಎಂದರು.
ಸದ್ಯಕ್ಕೆ ಲಾಕ್ಡೌನ್ ಮಾಡುವ ಉದ್ದೇಶ ಇಲ್ಲ. ಅನಿವಾರ್ಯವಾದರೆ ಮಾಡಬೇಕಾಗಬಹುದು. ಜನರ ಜೀವ ಉಳಿಸಲು ಆರ್ಥಿಕಾಭಿವೃದ್ಧಿ ಮತ್ತು ಶಾಲಾ -ಕಾಲೇಜು ಬಂದ್ ಮಾಡಬೇಕಾಗಬಹುದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್ ನಿಯಮಗಳನ್ನು ಮುರಿಯದೆ ಸ್ವಯಂ ಅನುಸರಿಸಬೇಕು ಎಂದು ಹೇಳಿದರು.
ಸಾರ್ವಜನಿಕರ ಸಹಕಾರ ಸೂಕ್ತ ರೀತಿಯಲ್ಲಿ ದೊರೆಯದಿದ್ದರೆ ಲಾಕ್ಡೌನ್ ಅನಿವಾರ್ಯವಾಗಬಹುದು. ಈಗಾಗಲೇ ಮಾಸ್ಕ್ ಧರಿಸದೆ ಓಡಾಟ ಮಾಡುವುದು ಕಂಡು ಬರುತ್ತಿದೆ. ಮದುವೆ ಮೊದಲಾದ ಕಾರ್ಯಕ್ರಮಗಳಿಗೆ ಸಾವಿರಾರು ಜನ ಸೇರುತ್ತಿದ್ದಾರೆ. ಇದು ಸೋಂಕು ಹರಡಲು ಎಡೆಮಾಡಿಕೊಡಬಹುದು. ಈಗಾಗಲೇ ಕೋವಿಡ್ 2ನೇ ಅಲೆಯಲ್ಲಿ ಉಂಟಾದ ಸಾವು-ನೋವುಗಳು ನಮ್ಮ ನೆನಪಿನಲ್ಲಿವೆ. ಅದಕ್ಕೆ ಅವಕಾಶ ಕೊಡದಂತೆ ತಡೆಯುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ