ಬೆಂಗಳೂರು,ಜ.6: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಹರಡುವ ಭೀತಿಯ ಹಿನ್ನೆಲೆಯಲ್ಲಿ ವಾರಾಂತ್ಯ ಕರ್ಫ್ಯೂ ಸಹಿತ ಕಠಿಣ ಕ್ರಮಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಜ.6 ರಿಂದ 19 ರ ವರೆಗೆ ಈ ನಿರ್ಬಂಧವು ಜಾರಿಯಲ್ಲಿರಲಿದೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ, ಧಾರ್ಮಿಕ ಕೇಂದ್ರಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ. ವ್ಯಾಕ್ಸಿನ್ ಹಾಕಿಸಿಕೊಂಡ 50 ಭಕ್ತರಿಗೆ ಮಾತ್ರ ಒಮ್ಮೆಲೆ ಅವಕಾಶ ಎಂದು ಉಲ್ಲೇಖಿಸಲಾಗಿದೆ.
ಮಸೀದಿಗಳಲ್ಲಿ ಪ್ರಾರ್ಥನೆಗಾಗಿ ಮಸೀದಿಯ ಸಾಮರ್ಥ್ಯಕ್ಕನುಗುಣವಾಗಿ ಶೇ.50 ರಷ್ಟು ಮಂದಿಗೆ ಪ್ರವೇಶಿಸಲು ಅನುಮತಿ ನೀಡುವಂತೆ ವಕ್ಫ್ ಮಂಡಳಿ ಬೇಡಿಕೆ ಇಟ್ಟಿದ್ದು, ಇದರನ್ವಯ ಕಟ್ಟು ನಿಟ್ಟಿನ ಕೋವಿಡ್ ಪ್ರೋಟೋಕಾಲ್ ಪಾಲನೆಯೊಂದಿಗೆ ಶೇ.50 ರಷ್ಟು ಮಂದಿಗೆ ಏಕಕಾಲಕ್ಕೆ ಮಸೀದಿ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿದೆ.
ಮಾರ್ಗಸೂಚಿಗಳು
- ಆಯಾ ಮಸೀದಿಯ ಸಾಮರ್ಥ್ಯಕ್ಕನುಗುಣವಾಗಿ ಶೇ.50 ಮುಸಲ್ಲಿಗಳಿಂದ ಮೀರಬಾರದು.
- ಮಸೀದಿ ಪ್ರವೇಶಕ್ಕೆ ಮುಂಚಿತವಾಗಿ ದೇಹದ ತಾಪಮಾನವನ್ನು ತಪಾಸಣೆ ಮಾಡುವುದು, ಕೈಗಳನ್ನು ಸೋಪು ಅಥವಾ ಸ್ಯಾನಿಟೈಝರ್ ನಿಂದ ಶುಚಿಗೊಳಿಸುವುದು.
- ಕಡ್ಡಾಯವಾಗಿ ಮಾಸ್ಕ್ ಧರಿಸುವುದು.
- ಎರಡು ಡೋಸ್ ಸಂಪೂರ್ಣ ಲಸಿಕೆ ಪಡೆದಿರುವುದು.
- ನಮಾಜ್ ಮಾಡುವವರ ಮಧ್ಯೆ ಕನಿಷ್ಠ 5 ಅಡಿ ಅಂತರವನ್ನು ಕಾಯ್ದುಕೊಳ್ಳುವುದು.
- 65 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕೆಳಗಿನವರು ಮನೆಯಲ್ಲಿ ನಮಾಜ್ ಮಾಡುವುದು.
- ಮನೆಯಿಂದಲೇ ಮುಸಲ್ಲಾ ತರುವುದು.
- ಹಸ್ತಲಾಘವ ಮತ್ತು ಆಲಿಂಗನ ಮಾಡದಿರುವುದು.
ಇದರೊಂದಿಗೆ, ಆರೋಗ್ಯ ಇಲಾಖೆ, ಪೋಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಕ್ಫ್ ಮಂಡಳಿಗೆ ಸರ್ಕಾರ ನಿರ್ದೇಶಿಸಿದೆ. 

















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ