ನವದೆಹಲಿ: ಹೊಸ ಕೋವಿಡ್-19 ನಿಯಮಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಜ.08 ರಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದೆ.
ಪಂಜಾಬ್, ಉತ್ತರಾಖಂಡ್, ಗೋವಾ, ಮಣಿಪುರ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ವರ್ಷ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ಕೋವಿಡ್-19 ನಿಯಮಗಳ ಪಾಲನೆಯೊಂದಿಗೆ ಮತದಾನ ನಡೆಯಲಿದೆ.
ಕೋವಿಡ್-19 ಸುರಕ್ಷತಾ ಕ್ರಮಗಳ ಹಿನ್ನೆಲೆಯಲ್ಲಿ ಮತದಾನದ ಗಡುವನ್ನು 1 ಗಂಟೆ ಹೆಚ್ಚು ವಿಸ್ತರಿಸಲಾಗಿದೆ. ಹಾಗೂ ರಾಜಕೀಯ ಪಕ್ಷಗಳು ಹೆಚ್ಚು ವರ್ಚ್ಯುಯಲ್ ರ್ಯಾಲಿಗಳತ್ತ ಗಮನ ಹರಿಸಬೇಕೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಚುನಾವಣೆ ಎದುರಿಸಲಿರುವ 5 ರಾಜ್ಯಗಳಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ಫೆ.10 ರಿಂದ ಮತದಾನ ಪ್ರಾರಂಭವಾಗಿ ಮಾ.7 ವರೆಗೆ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು ಮಾ.10 ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಪಂಜಾಬ್, ಗೋವಾ, ಉತ್ತರಾಖಂಡ್ ಗಳಲ್ಲಿ ಫೆ.14 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದರೆ, ಮಣಿಪುರದಲ್ಲಿ ಫೆ.27 ರಂದು ಮೊದಲ ಹಂತ ಹಾಗೂ ಮಾ.03 ರಂದು 2 ನೇ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ 7 ಹಂತದ ಚುನಾವಣೆ ನಡೆಯಲಿದೆ. ಫೆ.10 ರಂದು ಮೊದಲ ಹಂತದ ಮತದಾನ
ಫೆ.14- ದ್ವಿತೀಯ ಹಂತದ ಮತದಾನ
ಫೆ.20- ತೃತೀಯ ಹಂತ
ಫೆ.23-4 ನೇ ಹಂತ
ಫೆ.27-5 ನೇ ಹಂತ
ಮಾ.3 ರಂದು 6 ನೇ ಹಂತ
ಮಾ.07- 7 ನೇ ಹಂತ ಎಂದು ಆಯುಕ್ತರು ತಿಳಿಸಿದ್ದಾರೆ. ಮಾ.10 ರಂದು ಫಲಿತಾಂಶ ಹೊರಬೀಳಲಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ