ಅಮೃತಸರ: ಇಟೆಲಿಯಿಂದ ಪಂಜಾಬಿನ ಅಮೃತಸರಕ್ಕೆ ಬಂದ ಪ್ರಯಾಣಿಕರ ಕೋವಿಡ್ ವರದಿಯಲ್ಲಿ ತಪ್ಪು ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಖಾಸಗಿ ಲ್ಯಾಬೊರೇಟರಿ ವಿರುದ್ಧ ತನಿಖೆ ಕೈಗೊಳ್ಳಲಾಗಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಇಟೆಲಿಯಿಂದ ಆಗಮಿಸಿದ್ದ ಹಲವು ಪ್ರಯಾಣಿಕರು ತಮ್ಮ ಕೋವಿಡ್ ವರದಿ ತಪ್ಪಾಗಿ ಬಂದಿದೆ ಎಂದು ಆರೋಪಿಸಿದ್ದರು. ವಿಮಾನ ಹತ್ತುವ ಮೊದಲು ಪರೀಕ್ಷೆ ನಡೆಸಿದಾಗ ಕೋವಿಡ್ ನೆಗೆಟಿವ್ ಇತ್ತಾಗಿಯೂ, ವಿಮಾನದಿಂದ ಇಳಿಯುವ ಹೊತ್ತಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿರುವ ಕುರಿತು ಅನುಮಾನ ವ್ಯಕ್ತಪಡಿಸಿರುವ ಪ್ರಯಾಣಿಕರು, ತಮ್ಮ ವರದಿ ತಪ್ಪಾಗಿ ಬಂದಿದೆ ಎಂದು ದೂರಿದ್ದರು.
ಅದೂ ಅಲ್ಲದೆ, ಕೆಲವು ಪ್ರಯಾಣಿಕರನ್ನು ಮರು ಪರೀಕ್ಷೆಗೆ ಒಳಪಡಿಸಿದ್ದು, ಎರಡನೇ ಬಾರಿ ಕೋವಿಡ್ ನೆಗೆಟಿವ್ ವರದಿ ಬಂದಿತ್ತು. ಇದು ಪ್ರಯಾಣಿಕರ ಆರೋಪಕ್ಕೆ ಇನ್ನಷ್ಟು ಪುಷ್ಟಿ ನೀಡಿತ್ತು.
ಆರೋಪ ಕೇಳಿ ಬಂದ ಬೆನ್ನಲ್ಲೇ, ಅಮೃತಸರ ವಿಮಾನ ನಿಲ್ದಾಣ ಅಧಿಕಾರಿಗಳು ಸ್ಥಳೀಯ ಲ್ಯಾಬೊರೇಟರಿ ಒಂದರ ಸೇವೆಯನ್ನು ಪಡೆಯಲು ತೀರ್ಮಾನಿಸಿದ್ದು, ಈ ಮೊದಲು ಸೇವೆ ಸಲ್ಲಿಸುತ್ತಿದ್ದ ದಿಲ್ಲಿ ಮೂಲದ ಲ್ಯಾಬೊರೇಟರಿ ವಿರುದ್ಧ ತನಿಖೆ ಆರಂಭಿಸಿದ್ದಾರೆ.
ಸಹಾಯಕ ಸಿವಿಲ್ ಸರ್ಜನ್ ಡಾ. ಅಮರ್ಜಿತ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, “ಲ್ಯಾಬ್ನ ದೋಷಪೂರಿತ ಕೆಲಸಗಳ ವಿರುದ್ಧ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಿಂದ ತನಿಖೆಯನ್ನು ಪ್ರಾರಂಭಿಸಲಾಗಿದೆ. ಪ್ರಸ್ತುತ ದೆಹಲಿ ಮೂಲದ ಲ್ಯಾಬ್ನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸ್ಥಳೀಯ ಲ್ಯಾಬ್ ಒಂದು ತನ್ನ ಕೆಲಸವನ್ನು ಪುನರಾರಂಭಿಸಿದೆ.” ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ