ನವದೆಹಲಿ : ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್ ಸಹಿತ ದೇಶದಲ್ಲಿ ವ್ಯಾಪಕವಾಗಿ ಮತೀಯ ಗಲಭೆಗೆ ಬಹಿರಂಗ ಆಹ್ವಾನ ನೀಡಲಾಗುತ್ತಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿತ್ತಿರುವ ಈ ಸಂದರ್ಭದಲ್ಲಿ ಪ್ರಧಾನಿಯು ಮೌನಿಯಾಗಿರುವುದನ್ನು ಪ್ರಶ್ನಿಸಿ ಅದ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಪ್ರಧಾನಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಇಂಡಿಯನ್ ಇನ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ (IIM) ಬೆಂಗಳೂರು ಮತ್ತು ಅಹ್ಮದಾಬಾದ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು, ದೇಶದಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ಹಿಂಸಾಚಾರ, ದ್ವೇಷದ ಭಾಷಣದ ವಿರುದ್ಧ ಧ್ವನಿ ಎತ್ತಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯರೊಂದಿಗೆ ಬಹಿರಂಗ ಪತ್ರದಲ್ಲಿ ಆಗ್ರಹಿಸಿದ್ದಾರೆ.
‘ಪ್ರಧಾನಿಗಳೇ ನಿಮ್ಮ ಮೌನವು ದ್ವೇಷ ಬಿತ್ತುವ ಧ್ವನಿಗಳಿಗೆ ಧೈರ್ಯ ತುಂಬುತ್ತದೆ. ನಮ್ಮನ್ನು ವಿಭಜಿಸಿ ದೇಶದ ಏಕತೆ ಸಮಗ್ರತೆಗೆ ಧಕ್ಕೆ ತರಲು ಪ್ರಯತ್ನಿಸುವ ಶಕ್ತಿಗಳ ವಿರುದ್ಧ ದೃಢವಾಗಿ ನಿಲ್ಲುವಂತೆ ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ’ ಎಂದು ಪತ್ರದಲ್ಲಿ ಬರೆದಿದ್ದಾರೆ. ಇತ್ತೀಚೆಗೆ ಹರಿದ್ವಾರ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕೆಲವು ಹಿಂದೂ ನಾಯಕರು ಮುಸ್ಲಿಂರ ವಿರುದ್ಧ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದರಲ್ಲದೇ ಸಾರ್ವಜನಿಕವಾಗಿ ನರಮೇಧಕ್ಕೆ ಕರೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ‘ಸಂವಿಧಾನ ನಮಗೆಲ್ಲ ಧಾರ್ಮಿಕ ಸ್ವಾತಂತ್ರ್ಯ ನೀಡಿದರೂ ಈ ಕುರಿತು ದೇಶದಲ್ಲೀಗ ಭಯದ ಭಾವನೆಯಿದೆ. ಪ್ರಾರ್ಥನಾ ಸ್ಥಳ, ಚಚ್ರ್ಗಳನ್ನು ಧ್ವಂಸಗೊಳಿಸಲಾಗುತ್ತಿದೆ. ಯಾವುದೇ ಭಯವಿಲ್ಲದೇ ಮುಕ್ತವಾಗಿ ಮುಸ್ಲಿಂ ಸಹೋದರ, ಸಹೋದರಿಯರ ವಿರುದ್ಧ ಶಸ್ತ್ರಾಸ್ತ್ರ ಕೈಗೆತ್ತಿಕೊಳ್ಳುವಂತೆ ಕರೆ ನೀಡಲಾಗಿತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಐಐಎಂ ಬೆಂಗಳೂರಿನ ಪ್ರಾಧ್ಯಾಪಕರಾದ ದೀಪಕ್ ಮಲ್ಘಾಣ, ಹೇಮಾ ಸ್ವಾಮಿನಾಥನ್, ರಾಜಲಕ್ಷ್ಮಿ ವಿ ಮೂರ್ತಿ, ಪ್ರತೀಕ್ ರಾಜ್ ಮತ್ತು ದಲ್ಹಿಯಾ ಮಣಿ ಅವರು ಈ ಪತ್ರವನ್ನು ಸಿದ್ಧಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ