ಬೆಂಗಳೂರು: ಕೊರೋನಾ ಮೂರನೇ ಅಲೆ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ, ಕೆಲವರಿಗೆ ಸೋಂಕಿನ ತೀವ್ರತೆಯಿದೆ, ಯಾರೂ ಕೂಡ ನಿರ್ಲಕ್ಷ್ಯ, ಉದಾಸೀನ ಮಾಡಬೇಡಿ, ಜನರ ಮುಂದೆ ಇರುವಾಗ, ಹೊರಗೆ ಓಡಾಡುವಾಗ, ಕಚೇರಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.
ಬೂಸ್ಟರ್ ಡೋಸ್ ಪಡೆಯಲು ಅರ್ಹತೆ ಇರುವವರೆಲ್ಲರೂ, ಎರಡನೇ ಡೋಸ್ ಪಡೆಯುವವರು ಕೂಡ ಕಡ್ಡಾಯವಾಗಿ ಪಡೆಯಿರಿ. ಜನರು ಆತಂಕಪಡುವ ರೀತಿಯಲ್ಲಿ ಸರ್ಕಾರದ ಪ್ರತಿನಿಧಿಗಳು ಹೇಳಿಕೆಗಳನ್ನು ನೀಡುವುದಿಲ್ಲ. ಜನರು ಸ್ವಯಂಪ್ರೇರಣಿಯಿಂದ ಕೊರೋನಾ ಹತ್ತಿಕ್ಕಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಎರಡು ವರ್ಷಗಳಾಗುತ್ತಾ ಬಂದಿರುವಾಗ ಕೊರೋನಾ ನಿಯಂತ್ರಣಕ್ಕೆ ಏನೆಲ್ಲಾ ಮಾಡಬೇಕು ಎಂದು ಪಾಠ ಕಲಿತಿದ್ದೇವೆ.
ಲಾಕ್ ಡೌನ್ ಹೇರಿಕೆ ಸರಿಯಲ್ಲ: ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿತ್ತು. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ ಅರಿವಾಗಿದೆ, ಈಗಾಗಲೇ ನಿನ್ನೆ ಪ್ರಧಾನ ಮಂತ್ರಿ ಮೋದಿಯವರು ಮುಖ್ಯಮಂತ್ರಿಗಳ ಜೊತೆ ಸಂವಾದ ಮಾಡುವ ಸಂದರ್ಭದಲ್ಲಿ ಜನರಿಗೆ ಆರ್ಥಿಕ ನಷ್ಟವಾಗದ ರೀತಿಯಲ್ಲಿ ಜಾಗೃತೆ ವಹಿಸಬೇಕೆಂದು ಹೇಳಿದ್ದಾರೆ, ಆ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಜನರೇ ಸ್ವಯಂ ನಿಯಂತ್ರಣ ಮಾಡಿಕೊಂಡು ಇನ್ನು ಒಂದೂವರೆ ತಿಂಗಳು ಸಹಕರಿಸಿದರೆ ಖಂಡಿತವಾಗಿಯೂ ಕೊರೋನಾ ನಿಯಂತ್ರಣವಾಗುತ್ತದೆ, ಲಾಕ್ ಡೌನ್ ಹೇರಿಕೆಯೊಂದೇ ಅಸ್ತ್ರವಲ್ಲ, ಎರಡು ತಿಂಗಳು ಜನರು ಕೊರೋನಾ ಮಾರ್ಗಸೂಚಿ, ನಿಯಮಗಳನ್ನು ಪಾಲಿಸಿದರೆ ಇದನ್ನು ನಿಯಂತ್ರಿಸಲು ಖಂಡಿತಾ ಸಾಧ್ಯವಿದೆ ಎಂದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೋನಾ ಸೋಂಕು ಜಾಸ್ತಿಯಾಗುತ್ತಿದೆ. ಶೇಕಡಾ 5ರಿಂದ 6ರಷ್ಟು ಜನರು ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿರುವುದು ಒಂದು ಸಮಾಧಾನದ ಸಂಗತಿ. ವೈದ್ಯರು, ದಾದಿಯರಿಗೂ ಬರುತ್ತಿರುವುದರಿಂದ ಆರೋಗ್ಯ ಸೇವೆಗೆ ವ್ಯತ್ಯಯವಾಗಬಹುದು ಎಂಬ ಆತಂಕವಿದೆ ಎಂದರು.
ಕೊರೋನಾ ನಿಯಂತ್ರಣವಾಗಲು ಕನಿಷ್ಠ 14-15 ದಿನ ಬೇಕು. ವೀಕೆಂಡ್ ಕರ್ಫ್ಯೂ, ಕೊರೋನಾ ನಿರ್ಬಂಧ ಮಾಡಿ ಎರಡು ವಾರಗಳಾಗಿವೆಯಷ್ಟೆ. ಒಂದೇ ವಾರದಲ್ಲಿ ಕೊರೋನಾ ಸೋಂಕು ಕಡಿಮೆಯಾಗುವುದಿಲ್ಲ. ಓಮಿಕ್ರಾನ್ 5ರಿಂದ 6 ಪಟ್ಟು ವೇಗವಾಗಿ ಹರಡುತ್ತದೆ. ಕೊರೋನಾ ಮೂರನೇ ಅಲೆ ಇನ್ನೂ ಗರಿಷ್ಠ ಮಟ್ಟಕ್ಕೆ ತಲುಪಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?