ನವದೆಹಲಿ|ದುಬೈ ವಿಮಾನ ನಿಲ್ದಾಣದಲ್ಲಿ ಭಾರೀ ಅಚಾತುರ್ಯವೊಂದು ಸಂಭವಿಸಿದ್ದು ಅಧಿಕಾರಿಗಳ ಸಮಯಪ್ರಜ್ಞೆಯಿಂದ ಬಲು ದೊಡ್ಡ ದುರಂತವು ತಪ್ಪಿದಂತಾಗಿದೆ. ಒಂದೇ ರನ್ ವೇಯಲ್ಲಿ ಎರಡು ವಿಮಾನಗಳು ಟೇಕಾಫ್ ಆಗಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಕೊನೆಯ ಕ್ಷಣದಲ್ಲಿ ಏರ್ ಟ್ರಾಫಿಕ್ ಕಂಟ್ರೋಲ್ ಸಮಯೋಚಿತ ಮಧ್ಯಪ್ರವೇಶದ ನಂತರ ಒಂದು ವಿಮಾನವನ್ನು ಟ್ಯಾಕ್ಸಿ ಬೇಗೆ ತಿರುಗಿಸುವಲ್ಲಿ ಯಶಸ್ವಿಯಾದ್ದರಿಂದ ಭಾರೀ ಅಪಘಾತವೂಂದು ತಪ್ಪಿದೆ.
ಬೆಂಗಳೂರು ಮತ್ತು ಹೈದರಾಬಾದ್ಗೆ ತೆರಳುತ್ತಿದ್ದ ಎಮಿರೇಟ್ಸ್ನ ಎರಡು ವಿಮಾನಗಳು ಅಪಘಾತದಿಂದ ಪಾರಾಗಿವೆ. ಹೈದರಾಬಾದ್ಗೆ ತೆರಳುವ ಇಕೆ 524 ವಿಮಾನ ರಾತ್ರಿ 9.45ಕ್ಕೆ ಹೊರಡಬೇಕಿತ್ತು. ಫ್ಲೈಟ್ EK568 ಕೇವಲ ಐದು ನಿಮಿಷಗಳ ಅಂತರದಲ್ಲಿ ಟೇಕ್ ಆಫ್ ಮಾಡಲು ನಿರ್ಧರಿಸಲಾಗಿತ್ತು. ದುರದೃಷ್ಟವಶಾತ್ ಈ ಎರಡು ವಿಮಾನಗಳು ಒಂದೇ ಸಮಯದಲ್ಲಿ ರನ್ವೇ ಮೇಲೆ ಬಂದಿವೆ.
ಹೈದರಾಬಾದಿಗೆ ಹೊರಟಿದ್ದ ವಿಮಾನ ಟೇಕಾಫ್ಗಾಗಿ ವೇಗವಾಗಿ ಸಾಗುತ್ತಿದ್ದಾಗ ಅದೇ ದಿಕ್ಕಿನಲ್ಲಿ ಇನ್ನೊಂದು ವಿಮಾನ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದಾರೆ. ಟೇಕ್-ಆಫ್ ಅನ್ನು ತಕ್ಷಣವೇ ನಿಲ್ಲಿಸುವಂತೆ ಏರ್ ಟ್ರಾಫಿಕ್ ಕಂಟ್ರೋಲ್ ಗೆ ಸೂಚಿಸಲಾಗಿದೆ. ನಂತರ ವಿಮಾನವು ನಿಧಾನವಾಗಿ, ರನ್ವೇ ದಾಟಿ ಟ್ಯಾಕ್ಸಿ ಬೇಗೆ ಚಲಿಸಿತು. ಇದೇ ರನ್ ವೇಯಲ್ಲಿ ಬೆಂಗಳೂರಿಗೆ ತೆರಳುವ ವಿಮಾನವನ್ನು ಟೇಕ್ ಆಫ್ ಮಾಡಲಾಯಿತು. ಕೆಲವು ನಿಮಿಷಗಳ ನಂತರ ಹೈದರಾಬಾದ್ ವಿಮಾನ ಹೊರಟಿದೆ.
ಯುಎಇಯಲ್ಲಿನ ಎಎಐಎಸ್ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುತ್ತಿದೆ. ಗಂಭೀರ ಭದ್ರತಾ ಲೋಪವನ್ನು ಎಮಿರೇಟ್ಸ್ ಖಚಿತಪಡಿಸಿದೆ ಎಂದು ANI ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ