ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಆದೇಶ ಹೊರಡಿಸಿದ್ದು, ಕೋವಿಡ್ ಸಹಿತ ಯಾವುದೇ ಕಾಯಿಲೆಗಳು ಗಂಭೀರವಾಗಿಲ್ಲದಿದ್ದರೆ ಮುಂದಿನ ಎರಡು ವಾರ ಆ ರೋಗಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಬಾರದು. ಮನೆಯಲ್ಲೇ ಆರೈಕೆಗೆ ಒಳಪಡಬೇಕು ಎಂದು ತಿಳಿಸಿದೆ.
ತುರ್ತು ಚಿಕಿತ್ಸೆಯ ಆವಶ್ಯಕತೆ ಇರುವ ರೋಗಿಗಳು ಮಾತ್ರ ಆಸ್ಪತ್ರೆಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಸ್ವಾಯತ್ತ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಸೌಮ್ಯ ಲಕ್ಷಣಗಳಿರುವ ರೋಗಿಗಳು ಮುಂದಿನ ಎರಡು ವಾರ ಅಥವಾ ಮುಂದಿನ ಆದೇಶದ ವರೆಗೆ ಆಸ್ಪತ್ರೆಗಳಿಗೆ ಭೇಟಿ ನೀಡಬಾರದು. ಮನೆಯಲ್ಲೇ ಆರೈಕೆಗೆ ಒಳಪಡಬೇಕು ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್ ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳಿಗೂ ಈ ಆದೇಶ ಅನ್ವಯ ಆಗಲಿದೆ ಎಂದು ತಿಳಿದು ಬಂದಿದೆ.
ಕೋವಿಡ್-19 ಪರೀಕ್ಷೆಗೆ ಮಾದರಿ ಕೊಟ್ಟವರು ಫಲಿತಾಂಶ ಬರುವವರೆಗೆ ಐಸೋಲೇಶನ್ ಅಥವಾ ಹೋಮ್ ಕ್ವಾರಂಟೈನ್ನಲ್ಲೇ ಇರಬೇಕು. ನಿಯಮ ಉಲ್ಲಂಹಿಸಿ ಹೊರಬಂದರೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಸಿದೆ.ಕೋವಿಡ್ ಪರೀಕ್ಷೆಗಾಗಿ ಮಾದರಿ ಕೊಟ್ಟವರಲ್ಲಿ ಸೋಂಕು ಇರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪರೀಕ್ಷೆಗೆ ಮಾದರಿ ನೀಡಿ ಬೇಕಾಬಿಟ್ಟಿ ಅಡ್ಡಾಡಿದರೆ ಕಾನೂನು ಕ್ರಮ ಕೈಗೊಳ್ಳ ಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
ಅನೇಕ ರೋಗಿಗಳು ಅಗತ್ಯವಿಲ್ಲದಿದ್ದರೂ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.ಇದನ್ನು ತಪ್ಪಿಸಿ ಅಗತ್ಯವಿರುವವರಿಗೆ ಹಾಸಿಗೆ ಒದಗಿಸಲು ವೈದ್ಯರ ಸಲಹೆ, ಮಾರ್ಗದರ್ಶನ ಅಗತ್ಯ. ದೂರವಾಣಿ ಕರೆ ಮಾರ್ಗದರ್ಶನ ನೀಡಿದರೆ, ಅನುಕೂಲವಾಗುತ್ತದೆ. ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್