ಹೊಸದಿಲ್ಲಿ: ದೇಶದಲ್ಲಿ ಮತದಾನಕ್ಕೆ ಮತಪತ್ರಗಳ ಬದಲಿಗೆ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಪರಿಚಯಿಸಲು ಕಾರಣವಾದ ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ನೀಡಿದೆ. ಉತ್ತರಪ್ರದೇಶ, ಗೋವಾ, ಪಂಜಾಬ್, ಮಣಿಪುರ ಹಾಗೂ ಉತ್ತರಾಖಂಡದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮನವಿಯ ವಿಚಾರಣೆ ನಡೆಸುವ ಅಗತ್ಯತೆ ಇದೆ ಎಂಬ ನ್ಯಾಯವಾದಿ ಎಂ.ಎಲ್. ಶರ್ಮಾ ಅವರ ಪ್ರತಿಪಾದನೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರನ್ನು ಒಳಗೊಂಡ ಪೀಠ ಆಲಿಸಿತು.
‘‘ನಾವು ಪರಿಶೀಲಿಸಲಿದ್ದೇವೆ. ನಾನು ಅದನ್ನು ಇತರ ಪೀಠದ ಮುಂದೆ ವಿಚಾರಣೆಗೆ ಪರಿಗಣಿಸಲಿದ್ದೇನೆ’’ ಎಂದು ರಮಣ ಅವರು ಹೇಳಿದರು.
ಇವಿಎಂಗಳ ಬಳಕೆಗೆ ಅನುಮತಿ ನೀಡುವ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 61 ಎ ಸಂಸತ್ತಿನಲ್ಲಿ ಅಂಗೀಕಾರಗೊಂಡಿಲ್ಲ. ಆದುದರಿಂದ ಅದನ್ನು ಹೇರಲು ಸಾಧ್ಯವಿಲ್ಲ ಎಂದು ಶರ್ಮಾ ಅವರು ತಿಳಿಸಿದರು. ‘‘ನಾನು ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದ್ದೇನೆ. ನ್ಯಾಯಾಂಗ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು. ಮತಪತ್ರದ ಮೂಲಕ ಚುನಾವಣೆ ನಡೆಯಲಿ’’ ಎಂದು ಶರ್ಮಾ ಅವರು ಪ್ರತಿಪಾದಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್