ನವದೆಹಲಿ: ಕೊರೋನಾ ಹರಡುವ ಭೀತಿಯಿಂದಾಗಿ ಕಳೆದ ಎರಡು ವರ್ಷದಿಂದ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು 2022ರ ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಹೊರಡಿಸಿರುವ ಆದೇಶದ ಪ್ರಕಾರ, ಕೊರೊನಾ ಪ್ರಕರಣ ವಿಶ್ವದಲ್ಲಿ ಮತ್ತೆ ಹೆಚ್ಚಾಗುತ್ತಿರುವುದರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಇಂದು ಅಧಿಸೂಚನೆ ಹೊರಡಿಸಿದೆ.
ಕೊರೊನಾ ಮೂರನೇ ಅಲೆ ಭಾರತದಲ್ಲಿ ಈಗಾಗಲೇ ಕಾಣಿಸಿಕೊಂಡಿರುವುದರಿಂದ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆ ವಿಧಿಸಿದ ನಿರ್ಬಂಧ ವಿಸ್ತರಿಸಲು ನಿರ್ಧರಿಸಿದ್ದು, ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ನಿಗದಿತ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಈ ನಿರ್ಬಂಧವು, ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.
ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಆ ಬಳಿಕ ಡಿಜಿಸಿಎ ಕಳೆದ ಡಿಸೆಂಬರ್ 15 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಈ ಸಂದರ್ಭ ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಇದೀಗ ವಿಶ್ವದ ಹಲವು ದೇಶಗಳು ಮತ್ತೆ ಕೊರೊನಾ ಸೋಂಕಿಗೆ ತತ್ತರಿಸಿದೆ ಹಾಗಾಗಿ ಭಾರತದಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ವಿಮಾನ ಸೇವೆಯ ನಿರ್ಬಂಧವನ್ನು ವಿಸ್ತರಿಸಿದೆ.
ಈ ನಡುವೆ ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಅರಬ್ ಎಮಿರೇಟ್ಸ್, ಯುನೈಟೆಡ್ ಕಿಂಗ್ಡಮ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಎರಡು ದೇಶಗಳು ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ