ನರಗುಂದ: ನರಹಂತಕರ ಕುಕೃತ್ಯಕ್ಕೆ ಬಲಿಯಾದ ಮರ್ಹೂಂ ಶಮೀರ್ ಶಹಾಪೂರ ರವರ ಮನೆಗೆ ಎಸ್ಸೆಸ್ಸೆಫ್ ಕೋಶಾಧಿಕಾರಿ ಹಾಫಿಝ್ ಸುಫ್ಯಾನ್ ಸಖಾಫಿ ಹಾಗೂ ತಂಡ ಭೇಟಿ ನೀಡಿ ಸಾಂತ್ವನ ಹೇಳಿದರು.
ಧರ್ಮ ಜಾತಿ ಅಥವಾ ರಾಜಕೀಯದ ಹೆಸರಲ್ಲಿ ಅಮಾಯಕ ಜೀವಗಳು ಬಲಿಯಾಗುತ್ತಿರುವುದು ಖಂಡನೀಯ. ಇದರಿಂದ ಯಾವ ಧರ್ಮಕ್ಕೂ ಲಾಭವೋ ನಷ್ಟವೋ ಇಲ್ಲ, ಬದಲಾಗಿ ಅಮಾಯಕ ಕುಟುಂಬಗಳು ಅನಾಥವಾಗುತ್ತಿವೆ ಎಂದು ಸ್ಪಷ್ಟಪಡಿಸಿದರು.ಅಮಾಯಕ ಯುವಕರನ್ನು ಗುಂಪುಸೇರಿ ಹತ್ಯೆ ಮಾಡುವುದು ಧೀರತೆಯಲ್ಲ, ಬದಲಾಗಿ ಅದು ಹೇಡಿತನ. ಇತರರ ಜೀವ ಉಳಿಸುವುದೇ ನಿಜವಾದ ಧೀರತೆ ಎಂದು ಅವರು ಹೇಳಿದರು.
ಜೀವಕ್ಕೆ ಬದಲಾಗಿ ಜೀವ ತೆಗೆಯುವುದು ಇಸ್ಲಾಮಿನ ಸಂಸ್ಕೃತಿಯಲ್ಲ. ಆದ್ದರಿಂದ ನಾವು ಯಾರೂ ಅಷ್ಟು ಕೀಳ್ಮಟ್ಟಕ್ಕೆ ಇಳಿಯಲ್ಲ. ಇಸ್ಲಾಮಿನ ಶರೀಅಃ ಚಾಲ್ತಿಯಲ್ಲಿರುವ ರಾಷ್ಟ್ರಗಳಲ್ಲೂ ಕೂಡ ನ್ಯಾಯಾಧೀಶರ ತೀರ್ಮಾನದಂತೆ ಮಾತ್ರವೇ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸೌಹಾರ್ದಯುತವಾಗಿ ಬದುಕುತ್ತಿದ್ದ ನರಗುಂದದ ಜನರೆಡೆಯಲ್ಲಿ ಧರ್ಮಾಂದತೆಯ ವಿಷಬೀಜ ಬಿತ್ತಿ ಅಮಾಯಕ ಕುಟುಂಬಗಳನ್ನು ಬೀದಿಪಾಲು ಮಾಡುತ್ತಿರುವ ಮುಖಂಡರು ಹಾಗೂ ಹಂತಕರಿಗೆ ತಕ್ಕ ಶಿಕ್ಷೆ ನೀಡಿ ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಹಾಫಿಝ್ ಸುಫ್ಯಾನ್ ಸಖಾಫಿ ಎಚ್ಚರಿಕೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ