ಮಂಗಳೂರು :ಉಡುಪಿ ಸರ್ಕಾರಿ ಬಾಲಕಿಯರ ಶಿಕ್ಷಣ ಸಂಸ್ಥೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರು ಶಿರವಸ್ತ್ರ ಹಿಜಾಬ್, ಸ್ಕಾರ್ಫ್ ಧರಿಸಿ ತರಗತಿಯಲ್ಲಿ ಪ್ರವೇಶಿಸುವುದಕ್ಕೆ ಸಂಸ್ಥೆಯ ಪ್ರಾಂಶುಪಾಲರು ತಡೆ ಒಡ್ಡಿ ಕಳೆದ 3 ವಾರಗಳಿಂದ ಸಂತ್ರಸ್ತ ವಿಧ್ಯಾರ್ಥಿಗಳು ಶಾಲೆಯ ಹೊರಗಡೆ ಇದ್ದು, ತರಗತಿ ಪ್ರವೇಶ ನಿರ್ಭಂದ ಗೊಳಿಸಲಾಗಿದೆ.
ವಿದ್ಯಾರ್ಥಿನಿಯರು ಅವರ ಧಾರ್ಮಿಕ ಸಂಕೇತವಾದ ದಿನವಹಿ ಹಿಜಾಬ್ ಧರಿಸುವುದು ಅವರ ಸಂವಿಧಾನ ಬದ್ದ ಹಕ್ಕು ಆಗಿರುತ್ತದೆ. ಯಾವುದೇ ವ್ಯಕ್ತಿಯ ವಸ್ತ್ರ ಧಾರಣೆ ಅದು ವೈಯುಕ್ತಿಕ ಆಯ್ಕೆ ಯಾಗಿರುತ್ತದೆ. ಅದನ್ನು ನಿರ್ಬಂಧಿಸುವ ಅಧಿಕಾರ ಯಾರಿಗೂ ಇಲ್ಲ. ಸರಕಾರಿ ಶಾಲಾ ವಿದ್ಯಾರ್ಥಿಗಳು ಸರಕಾರದ ಶೈಕ್ಷಣಿಕ ಸವಲತ್ತಿನ ಪ್ರಯೋಜನಾರ್ಥಿಗಳಾಗಿದ್ದಾರೆ.ಇಲ್ಲಿ ಶಾಲಾ ಮುಖ್ಯಸ್ಥರು ತನ್ನ ಉದ್ಧಟತನದಿಂದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನಿರಾಕರಿಸಿದ್ದಾರೆ.
ಈ ಮಧ್ಯೆ ಹಿಜಾಬ್ ಧರಿಸುವಿಕೆ ಅಶಿಸ್ತು ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ರವರು ಹೇಳಿಕೆ ನೀಡಿರುತ್ತಾರೆ. ಯಾವುದೇ ಓರ್ವ ಪ್ರಜೆಯ ವಸ್ತ್ರ ಧಾರಣೆ ಅವರ ಸಾಂವಿಧಾನಿಕ ಹಕ್ಕು ಮತ್ತು ಅದನ್ನು ಧರಿಸಲು ಈ ದೇಶದ ಸಂವಿಧಾನ ಮುಕ್ತ ಸ್ವಾತಂತ್ರ್ಯ ನೀಡಿದೆ. ಆ ಕಾರಣಕ್ಕೆ ತಡೆ ಒಡ್ಡುವಂತಿಲ್ಲ. ಶಿಕ್ಷಣ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು ಅವರ ಧಾರ್ಮಿಕ ಪೋಷಾಕು ಧರಿಸಿ ವಿದ್ಯಾರ್ಜನೆ ಮಾಡುವುದರಲ್ಲಿ ಪ್ರಾದ್ಯಾಪಕ ವೃಂದಕ್ಕೆ ಏನು ಸಮಸ್ಯೆ.
ಸಚಿವರಾದ ಬೀ.ಸಿ. ನಾಗೇಶ್ ರವರು ಅಸಾಂವಿಧಾನಿಕ ಹೇಳಿಕೆ ನೀಡಿರುತ್ತಾರೆ. ಈ ಹೇಳಿಕೆಯನ್ನು ಪ್ರಬಲವಾಗಿ ಖಂಡಿಸುತ್ತೇವೆ. ಶಿಕ್ಷಣ ಸಚಿವರು ತಕ್ಷಣ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಸೇರ್ಪಡೆ ಗೊಳಿಸಬೇಕು ಮತ್ತು ಇಂತಹ ಅಸಾಂವಿಧಾನಿಕ ಹೇಳಿಕೆ ಮೂಲಕ ಸಚಿವರು ಸಮಾಜದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕೃತ್ಯವವನ್ನು ಉತ್ತೇಜಿಸುತ್ತಿದ್ದಾರೆ. ಸಚಿವರು ಓರ್ವ ಜವಾಬ್ದಾರಿ ಸ್ಥಾನದಲ್ಲಿ ಇದ್ದು,ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ವಂಚಿಸುವ ಹೇಳಿಕೆ ನೀಡಿರುವುದು ಖಂಡನಾರ್ಹ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್