ಚಿಕ್ಕಮಗಳೂರು : ಸಂವಿಧಾನ ಸಂಸ್ಥಾಪನೆಯ 73ನೇ ವರ್ಷಾಚರಣೆ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ವೈಎಸ್ ರಾಜ್ಯ ನಾಯಕ ಯೂಸುಫ್ ಹಾಜಿ ಉಪ್ಪಳ್ಳಿ ಧ್ವಜಾರೋಹಣಗೈದರು.
ಸಂದೇಶ ಭಾಷಣ ಮಾಡಿದ ರಾಜ್ಯ ಕೋಶಾಧಿಕಾರಿ ಹಾಫಿಝ್ ಸುಫ್ಯಾನ್ ಸಖಾಫಿ ಮಾತನಾಡಿ ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ನಮ್ಮದು. ಪ್ರಪಂಚದ ಮುಂದೆ ಭಾರತಕ್ಕೆ ಹೆಮ್ಮೆ ತಂದ ಸಂವಿಧಾನವಿದು. ಹಲವು ವೈವಿಧ್ಯತೆಗಳ ಮಧ್ಯೆ ಭಾರತವನ್ನು ಕಾಪಾಡಿದ್ದು ಸಂವಿಧಾನದ ಏಕತೆಯ ಸಂದೇಶವಾಗಿದೆ. ಆದ್ದರಿಂದಲೇ ಸಂವಿಧಾನದ ಸಂರಕ್ಷಣೆಗಾಗಿ ವಿದ್ಯಾರ್ಥಿಗಳು ಮುಂದೆ ಬರಬೇಕು, ಈ ದೇಶದ ಉಳಿವು ಸಂವಿಧಾನದ ಸಂರಕ್ಷಣೆಯಿಂದ ಮಾತ್ರ ಎಂದು ಹೇಳಿದರು.
ಕೆಲವರ ಸ್ವಾರ್ಥಕ್ಕಾಗಿ ಸಂವಿಧಾನದ ಮೂಲ ತತ್ವಗಳಿಗೆ ಕತ್ತರಿ ಹಾಕದೆ, ದೇಶದ ಭವ್ಯ ಭವಿಷ್ಯಕ್ಕಾಗಿ ಸಂವಿಧಾನದ ಪಾಠವನ್ನು ವಿದ್ಯಾರ್ಥಿಗಳಿಗೆ ಕಲಿಸಿ ಕೊಡುವ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಕಾರ್ಯದರ್ಶಿಗಳಾದ ಸಫ್ವಾನ್ ಚಿಕ್ಕಮಗಳೂರು, ಶರೀಫ್ ಕೊಡಗು, ಅಬ್ದುಲ್ ಹಕೀಂ ಬೆಂಗಳೂರು, ಮುನೀರ್ ಸಖಾಫಿ ಉಳ್ಳಾಲ, ಎನ್ ಸಿ ರಹೀಂ ಉಡುಪಿ, ಹೊಸ್ಮಾರ್ ಸಅದಿ, ಮುಬಶ್ಶಿರ್ ಅಹ್ಸನಿ, ಇಸ್ಮಾಯಿಲ್ ಸಅದಿ ಮಾಚಾರ್, ಅಶ್ರಫ್ ಸಖಾಫಿ ಹರಿಹರ, ಜುನೈದ್ ಸಖಾಫಿ ಚಿತ್ರದುರ್ಗ, ಯಾಸೀನ್ ಸಖಾಫಿ ಹಾವೇರಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ