ದಮ್ಮಾಮ್ (ಕೆ.ಎಸ್.ಎ): ಇಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಸುಪರ್ವೈಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ಬಿಹಾರದ ಶತ್ರುದಾನ್ ಎಂಬುವವರು ಸುಮಾರು ಒಂದೂವರೆ ವರ್ಷದ ಹಿಂದೆ ದಿಢೀರನೆ ಕಾಣಿಸಿಕೊಂಡ ರೋಗ ಉಲ್ಬಣಗೊಂಡು ಕಿಂಗ್ ಫಹದ್ ಆಸ್ಪತ್ರೆಯಲ್ಲಿ ಕೋಮಾವಸ್ಥೆಯಲ್ಲಿದ್ದರು.
ಇವರನ್ನು ಊರಿಗೆ ಕಳಿಸುವ ವಿಷಯವಾಗಿ ಅವರ ಸಹೋದರ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ನಾಯಕರನ್ನು ಸಂಪರ್ಕಿಸಿದ್ದು, ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ವಿಂಗ್ ನಾಯಕರಾದ ಬಾಷಾ ಗಂಗಾವಳಿ, ಕೆಸಿಎಫ್ ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಿ.ಪಿ ಯೂಸುಫ್ ಸಖಾಫಿ ಬೈತಾರ್ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿ ಸಾಂತ್ವನ ವಿಂಗ್ ಅಧ್ಯಕ್ಷರಾದ ಮೊಹಮ್ಮದ್ ಮಲೆಬೆಟ್ಟು ಅವರ ನೇತೃತ್ವದಲ್ಲಿ ಸಂಘಟನೆಯ ಇತರ ಸ್ವಯಂಸೇವಕರೊಂದಿಗೆ ನಿಯಮಿತವಾಗಿ ರೋಗಿಯನ್ನು ಭೇಟಿ ಮಾಡಿ, ರೋಗಿಯನ್ನು ಊರಿಗೆ ಕಳಿಸಲು ಬೇಕಾದ ಮೂಲಭೂತ ಅಗತ್ಯಗಳನ್ನು ಪೂರೈಸಿಕೊಟ್ಟಿದ್ದಾರೆ.
ಇಂತಹಾ ಸ್ಥಿತಿಯಲ್ಲಿರುವ ರೋಗಿಯನ್ನು ಮರಳಿ ಸ್ವದೇಶಕ್ಕೆ ಕಳುಹಿಸುವುದು ಒಂದು ಸವಾಲಾಗಿತ್ತು. ಸೌದಿ ಕಾನೂನು ಹಾಗು ಆರೋಗ್ಯ ಇಲಾಖೆಯ ನಿರಂತರ ಸಂಪರ್ಕದಿಂದ ಜನವರಿ 26 ರಂದು ರೋಗಿಯನ್ನು ಊರಿಗೆ ಕಳಿಸುವಲ್ಲಿ ಯಶಸ್ವಿಯಾಯಿತು.
ಲಕ್ನೊ ವಿಮಾನ ನಿಲ್ದಾಣದಿಂದ ಆಂಬುಲನ್ಸ್ ಮುಖಾಂತರ ಬಿಹಾರ ತಲಪಿಸಲಾಯಿತು. ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಈ ಒಂದು ಉತ್ತಮ ಕಾರ್ಯಾಚರಣೆಯಲ್ಲಿ ಸಾಂತ್ವನ ವಿಭಾಗದೊಂದಿಗೆ ಬೆಂಗಾವಲಾಗಿ ನಿಂತ ದಮ್ಮಾಮ್ ಝೋನ್ ಕಾರ್ಯಕಾರಿ ಮತ್ತು ಕ್ಯಾಬಿನೆಟ್ ಸದಸ್ಯರಿಗೆ ಹಾಗು ಇನ್ನಿತರ ಸಂಘ ಸಂಸ್ಥೆ ನಾಯಕರಿಗೆ ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ವಿಭಾಗವು ಅಭಿನಂದನೆಗಳನ್ನು ಸಲ್ಲಿಸಿದೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ