ಮೀರತ್,ಫೆ.3: ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ಎಐಎಂಐಎಂ ನಾಯಕ ಅಸದುದ್ದೀನ್ ಉವೈಸಿ ಅವರ ವಾಹನವನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದೆ.ಈ ಬಗ್ಗೆ ಸ್ವತಃ ಉವೈಸಿಯವರೇ ಟ್ವೀಟ್ ಮಾಡಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಬೈಕ್ನಲ್ಲಿ ಬಂದಿದ್ದ ತಂಡ ಗುಂಡು ಹಾರಿಸಿದೆ. ದಾಳಿಯಲ್ಲಿ ತನಗೆ ಯಾವುದೇ ಗಾಯವಾಗಿಲ್ಲ, ಕಾರಿನ ಟೈರ್ ಪಂಕ್ಚರ್ ಆಗಿದ್ದರಿಂದ ಮತ್ತೊಂದು ಕಾರಿನಲ್ಲಿ ದೆಹಲಿಗೆ ವಾಪಸಾಗಿದ್ದೇನೆ ಎಂದು ಉವೈಸಿ ಹೇಳಿದ್ದಾರೆ. ಯುಪಿಯ ಮೀರತ್ನ ಕಿತ್ತೌರಿನಲ್ಲಿ ಪ್ರಚಾರ ಸಭೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ದಾಳಿ ನಡೆದಿದೆ. ಉತ್ತರ ಪ್ರದೇಶದ ಚಜರ್ಸಿ ಟೋಲ್ ಪ್ಲಾಜಾ ಬಳಿ ಈ ದಾಳಿ ನಡೆದಿದೆ.
“ಛಜರ್ಸಿ ಟೋಲ್ ಗೇಟ್ ಬಳಿ ಮೂರು ಮಂದಿಯ ಗುಂಪೊಂದು ನನ್ನ ಕಾರಿಗೆ 4 ಸುತ್ತು ಗುಂಡು ಹಾರಿಸಿದೆ. ಆ ಬಳಿಕ ಆಯುಧಗಳನ್ನು ಅಲ್ಲೇ ಬಿಟ್ಟು ಪರಾರಿಯಾದರು. ನನ್ನ ಕಾರಿನ ಟೈರ್ ಪಂಕ್ಚರ್ ಆಗಿದೆ, ಆದರೆ ನಾನು ಇನ್ನೊಂದು ಕಾರಿನಲ್ಲಿ ಹೊರಟಿದ್ದೇನೆ.ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಅಲ್ಹಮ್ದುಲಿಲ್ಲಾಹ್” ಎಂದು ಅವರು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
कुछ देर पहले छिजारसी टोल गेट पर मेरी गाड़ी पर गोलियाँ चलाई गयी। 4 राउंड फ़ायर हुए। 3-4 लोग थे, सब के सब भाग गए और हथियार वहीं छोड़ गए। मेरी गाड़ी पंक्चर हो गयी, लेकिन मैं दूसरी गाड़ी में बैठ कर वहाँ से निकल गया। हम सब महफ़ूज़ हैं। अलहमदु’लिलाह। pic.twitter.com/Q55qJbYRih
— Asaduddin Owaisi (@asadowaisi) February 3, 2022
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ