ಬೆಂಗಳೂರು,ಫೆ.4: ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಕಾಲೇಜಿಗೆ ಬರುವುದು ಧಾರ್ಮಿಕ ನಿಯಮ. ನಮ್ಮ ಸಂವಿಧಾನ ಎಲ್ಲಾ ಧರ್ಮದವರಿಗೂ ಅವರು ನಂಬಿದ ಆಚರಣೆಗಳನ್ನು ಪಾಲಿಸಲು ಅವಕಾಶ ನೀಡಿದೆ.
ಹಿಜಾಬ್ ಧರಿಸಿರುವ ಮುಸ್ಲಿಂ ಹೆಣ್ಣು ಮಕ್ಕಳನ್ನು ಕಾಲೇಜು ಪ್ರವೇಶಿಸದಂತೆ ಗೇಟ್ ಬಂದ್ ಮಾಡಿದ ಉಡುಪಿ ಜಿಲ್ಲೆ ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ
ಬಿಜೆಪಿಯವರು ಶಾಲಾ ಕಾಲೇಜುಗಳಲ್ಲೂ ರಾಜಕಾರಣ ಮಾಡಲಾರಂಭಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುತ್ತಿರುವುದು ಹೊಸದಲ್ಲ, ಆರಂಭದಿಂದಲೂ ಅವರು ಹಿಜಾಬ್ ಧರಿಸಿಯೇ ಬರುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳು ಈ ಮೊದಲು ಕೇಸರಿ ಶಾಲು ಧರಿಸಿ ಬರುತ್ತಿರಲಿಲ್ಲ. ಇದ್ದಕ್ಕಿದ್ದಂತೆ ಕೇಸರಿ ಶಾಲು ಹಾಕಿಕೊಳ್ಳುತ್ತಿರುವುದರ ಹಿಂದೆ ಇರುವ ದುರುದ್ದೇಶವೇನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ನಾನು ನೋಡಿದ್ದೇನೆ. ಅದರಲ್ಲಿ ವಸ್ತ್ರ ಸಂಹಿತೆ ಇಲ್ಲ. ಬಿಜೆಪಿಯವರು ತಮ್ಮ ಸರ್ಕಾರದ ಲೋಪ ದೋಷಣಗಳನ್ನು ಹಾಗೂ ವೈಪಲ್ಯಗಳನ್ನು ಮರೆ ಮಾಚಲು ವಿಷಯಾಂತರ ಮಾಡುತ್ತಿದ್ದಾರೆ. ಹಿಜಾಬ್ ವಿಷಯವನ್ನು ಬೇಕೆಂತಲೇ ಮುನ್ನೆಲೆಗೆ ತಂದಿದ್ದಾರೆ ಎಂದು ಆರೋಪಿಸಿದರು.
ಅವರ್ಯಾರೋ ಬಿಜೆಪಿಯ ಶಾಸಕ ರಘುಪತಿ ಭಟ್ ಸಭೆ ಮಾಡಿ ಹೇಳಿದರು ಎಂಬ ಕಾರಣಕ್ಕೆ ಪ್ರಾಂಶುಪಾಲರು ಕಾಲೇಜಿನ ಗೇಟ್ ಮುಚ್ಚಿ ಹಿಜಾಬ್ ಧರಿಸಿ ಬಂದ ಮಕ್ಕಳಿಗೆ ಪ್ರವೇಶ ನಿರಾಕರಿಸಿದ್ದಾರೆ. ಈ ರೀತಿ ಆದೇಶ ನೀಡಲು ರಘುಪತಿ ಭಟ್ ಯಾರು. ಪ್ರಾಂಶುಪಾಲರ ನಡವಳಿಕೆ ಶಿಕ್ಷಣದ ಮೂಲಭೂತ ಹಕ್ಕಿಗೆ ವಿರುದ್ಧವಾಗಿದೆ. ಕಡ್ಡಾಯ ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ. ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಈ ಹುನ್ನಾರ ಸರಿಯಲ್ಲ ಎಂದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ