ಆಗ್ರಾ : ನಿನ್ನೆ ಬುಧವಾರ ರಾತ್ರಿ ಸುರಿದ ಭಾರೀ ಮಳೆ ಮತ್ತು ಬೀಸಿದ ಪ್ರಬಲ ಗಾಳಿಗೆ ಇಲ್ಲಿನ ವಿಶ್ವ ಪ್ರಸಿದ್ಧ ತಾಜ್ ಮಹಲ್ ಐತಿಹಾಸಿಕ ಸ್ಮಾಕರದ ಪ್ರವೇಶ ದ್ವಾರದ ಸ್ತಂಭವೊಂದು ಉರುಳಿ ಬಿದ್ದಿರುವ ಘಟನೆ ವರದಿಯಾಗಿದೆ.
ತಾಜ್ ಮಹಲ್ ಪ್ರವೇಶಿಸುವ ದಕ್ಷಿಣ ಭಾಗದಲ್ಲಿರುವ ಪ್ರವೇಶ ದ್ವಾರದ ಸ್ತಂಭ ಉರುಳಿ ಬಿದ್ದಾಗ ಯಾವುದೇ ಅನಾಹುತ ಸಂಭವಿಸಲಿಲ್ಲ ಎಂದು ವರದಿಗಳು ತಿಳಿಸಿವೆ.
ತಾಜ್ ಮಹಲ್ಗೆ ಯಾವುದೇ ರೀತಿಯಲ್ಲಿ ಪ್ರಾಕೃತಿಕ ಹಾನಿ ಉಂಟಾಗದಂತೆ ಅದನ್ನು ಸಂರಕ್ಷಿಸಿಡುವ ಕೆಲಸಗಳು ನಡೆಯುತ್ತಿರುವ ನಡುವೆಯೇ ಈ ದುರಂತ ಸಂಭವಿಸಿದೆ.
ಈಚೆಗಷ್ಟೇ ಅಧಿಕಾರಿಗಳು ತಾಜ್ ಮಹಲ್ ಪ್ರವೇಶಿಸುವ ಅವಧಿಯನ್ನು ಮೂರು ಗಂಟೆಗೆ ಇಳಿಸುವ ಕ್ರಮ ಕೈಗೊಂಡಿದ್ದರು. ಈ ಐತಿಹಾಸಿಕ ಸ್ಮಾರಕ ಸಾಕಷ್ಟು ಹಳತಾಗಿರುವುದರಿಂದ ಪ್ರವಾಸಿಗರ ಒತ್ತಡಕ್ಕೆ ಗುರಿಯಾಗುವುದನ್ನು ಕಡಿಮೆ ಮಾಡಲು ಅಧಿಕಾರಿಗಳು ಈ ಕ್ರಮ ತೆಗೆದುಕೊಂಡಿದ್ದರು.
ಉತ್ತರ ಪ್ರದೇಶದ ಲಕ್ನೋ, ಕಾನ್ಪುರ, ಮಥುರಾ, ಕನೌಜ್, ಫಾರೂಕಾಬಾದ್, ಇಟಾವಾ ಮತ್ತು ಮೈನ್ಪುರಿಯಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ