ಬ್ರಹ್ಮಾವರ: ಕಣ್ಣಿನ ಆರೋಗ್ಯ ತಪಾಸಣಾ ಶಿಬಿರ, ಆಯ್ಯುಷ್ಮಾನ್ ಕಾರ್ಡ್ ಈಶ್ರಮ್ ಕಾರ್ಡ್ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಕರ್ನಾಟಕ ಮುಸ್ಲಿಂ ಜಮಾಅತ್ ಹಾರಾಡಿ ಗ್ರಾಮ ಸಮಿತಿಯ ವತಿಯಿಂದ ಪ್ರಸಾದ್ ನೇತ್ರಾಲಯ ಉಡುಪಿ, ರೋಟರಿ ರೋಯಲ್ ಬ್ರಹ್ಮಾವರ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಫಿ, ಜಾಮಿಯಾ ಮಸೀದಿ, ಎಸ್ಸೆಸ್ಸೆಫ್ ಹೊನ್ನಾಳ ಇವರ ಸಹಕಾರದೊಂದಿಗೆ ನಡೆಯಿತು.
ಶಾದಿ ಮಹಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಹೊನ್ನಾಳ ಮಸೀದಿ ಪೇಶಿ ಇಮಾಮ್ ಮೌಲಾನಾ ಫಕ್ರುದ್ದೀನ್ ರಝ್ವಿ ಕುರ್ ಆನ್ ಪಾರಾಯಣ ದೊಂದಿಗೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾರಾಡಿ ಗ್ರಾಮ ಮುಸ್ಲಿಂ ಜಮಾಅತ್ ಸಮಿತಿ ಅಧ್ಯಕ್ಷ ಇಮ್ರಾನ್ ಹೆನ್ನಾಬೈಲ್ ರವರು ವಹಿಸಿದ್ದರು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ನಿರ್ವಹಿಸಿದರು.
ಬ್ರಹ್ಮಾವರ ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷ ಜೆ ಮುಷ್ತಾಕ್ ಅಹ್ಮದ್ ,ಡಾ ಸೀಯೋಮ,ರೋಟೆರಿಯನ್ ರಾಜರಾಮ ಶೆಟ್ಟಿ, ನಾಗರಾಜ ಶೆಟ್ಟಿ ಹೊನ್ನಾಳ, ಇಮಾಮ್ ಸಾಹೇಬ್ ಟಂಕಸಾಲಿ, ಹಾಗೂ ಮೋಹನ್ ದಾಸ್ ಪ್ರಸಾದ್ ನೇತ್ರಾಲಯ ಉಡುಪಿ ಇವರುಗಳು ಸಾಂದರ್ಭಿಕವಾಗಿ ಮಾತನಾಡಿದರು
ಆಪತ್ಭಾಂದವ ರಫೀಕ್ ದೊಡ್ಡಣ್ಣಗುಡ್ಡೆ ಯವರಿಗೆ ಈ ವೇದಿಕೆಯಲ್ಲಿ ಸನ್ಮಾನಿಸಲಾಯಿತು
ಜಿಲ್ಲಾ ಮುಸ್ಲಿಂ ಜಮಾಅತ್ ಕಾರ್ಯಾಧ್ಯಕ್ಷ ಸುಬ್ಹಾನ್ ಅಹ್ಮದ್ ಹೊನ್ನಾಳ ಸ್ವಾಗತಿಸಿದರು, ಇಮ್ತಿಯಾಝ್ ಹೊನ್ನಾಳ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ