ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಲಂಬುಝ ಗ್ರಾಮದ ಬೆಟ್ಟವೊಂದರ ಸೀಳಿನಲ್ಲಿ 43 ಗಂಟೆಗಳಿಗೂ ಹೆಚ್ಚು ಕಾಲ ಸಿಲುಕಿದ್ದ ಬಾಬು (23) ಅವರನ್ನು ಸುರಕ್ಷಿತವಾಗಿ ಬದುಕಿಸುವ ಸೇನೆಯ ಕಾರ್ಯಾಚರಣೆ ಯಶಸ್ವಿಯಾಗಿದೆ. ಸೇನಾ ತಂಡವು ಬಾಬುವಿನ ಬಳಿಗೆ ಬಂದು ಊಟ, ನೀರು ನೀಡಿದ ನಂತರ ಸುರಕ್ಷತಾ ಬೆಲ್ಟ್ ಮತ್ತು ಹೆಲ್ಮೆಟ್ ಧರಿಸಿ ಬಾಬು ಅವರನ್ನು ಸೇನೆ ಮೇಲೆತ್ತಿದೆ. ಬೆಳಗ್ಗೆ 9.30ಕ್ಕೆ ಆರಂಭವಾದ 40 ನಿಮಿಷಗಳ ಕಾರ್ಯಾಚರಣೆಯ ಕೊನೆಯಲ್ಲಿ ಸೇನೆಯು ಬಾಬುನನ್ನು ಬೆಟ್ಟದ ತುದಿಗೆ ಕರೆದೊಯ್ದಿತು.
ಕೇರಳ ಸರ್ಕಾರದ ಮನವಿಯ ಮೇರೆಗೆ ಪರ್ವತಾರೋಹಣದಲ್ಲಿ ತರಬೇತಿ ಪಡೆದ ವೆಲಿಂಗ್ಟನ್ನ ಮದ್ರಾಸ್ ರೆಜಿಮೆಂಟ್ ಸೆಂಟರ್ನಿಂದ 12 ಸಿಬ್ಬಂದಿಯ ಒಂದು ತಂಡ ಮತ್ತು ಬೆಂಗಳೂರಿನ ಪ್ಯಾರಾಚೂಟ್ ರೆಜಿಮೆಂಟ್ ಸೆಂಟರ್ನಿಂದ 22 ಸಿಬ್ಬಂದಿಯ ಎರಡನೇ ತಂಡಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.
ರಾತ್ರಿಯೇ ಸ್ಥಳಕ್ಕಾಗಮಿಸಿದ ಸೇನಾ ತಂಡ ಬೆಟ್ಟದ ತುದಿ ತಲುಪಿ ಕೆಳಗೆ ಬಾಬು ಕುಳಿತಿದ್ದ ಜಾಗಕ್ಕೆ ಹಗ್ಗ ಬಿಗಿದಿತ್ತು. ಸೈನಿಕರು ಬಾಬು ಜೊತೆ ಮಾತನಾಡಿದ್ದರು. ಕರ್ನಲ್ ಶೇಖರ್ ಅತ್ರಿ ನೇತೃತ್ವದ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಕೇರಳ ಮೂಲದ ಲೆಫ್ಟಿನೆಂಟ್ ಕರ್ನಲ್ ಹೇಮಂತ್ ರಾಜ್ ಕೂಡ ತಂಡದಲ್ಲಿದ್ದರು.
ಬೆಟ್ಟದ ಕೆಳಗೆ, ವೈದ್ಯರು ಸೇರಿದಂತೆ ವೈದ್ಯಕೀಯ ತಂಡವು ಬಾಬುಗಾಗಿ ಕಾಯುತ್ತಿದೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಅವರು ಮುಂದಿನ ಆರೈಕೆಯನ್ನು ಒದಗಿಸುತ್ತಾರೆ. ಕೆಳಗೆ ಇಳಿಸಿದ ಕೂಡಲೇ ಬಾಬು ಅವರನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಇದಕ್ಕಾಗಿ ಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್