ಕುಶಾಲನಗರ : ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಜನೆಗೈಯ್ಯುತ್ತಿರುವ ಎಸ್ಸೆಸ್ಸೆಫ್ ಕಾರ್ಯಕರ್ತನಾದ ರಾಝಿಕ್ ನ ಮೇಲೆ RSS ಗೂಂಡಾ ಕಾರ್ಯಕರ್ತರು ಹಾಸ್ಟೆಲ್ ಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆಗೈದಿರುವ ಘಟನೆ ನಡೆದಿದ್ದು SSF ಕೊಡಗು ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆರವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಪಾನಮತ್ತನಾಗಿ ಬಂದ ಸಹಪಾಠಿಯೊಬ್ಬನೊಂದಿಗೆ ಕ್ಷುಲ್ಲಕ ವಿಚಾರಕ್ಕಾಗಿ ವಾಗ್ವಾದಗಳು ನಡೆದಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಆರೆಸ್ಸೆಸ್ಸ್ ಗೂಂಡಾಗಳು ವಿದ್ಯಾರ್ಥಿಯ ಮೇಲೆ ಹಲ್ಲೆಗೈದಿರುವುದು ಅಕ್ಷಮ್ಯ ಅಪರಾಧವಾಗಿದೆ,ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಅಕ್ರಮವಾಗಿ ಹಾಸ್ಟೆಲ್ ಪ್ರವೇಶಿಸಿ ಅಲ್ಲಿನ ಬಾಗಿಲು ಮುರಿದು ಹಲ್ಲೆಗೈದಿರುವುದು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದೆ,ಯಾವುದೋ ವಿಚಾರಕ್ಕೆ ಉಂಟಾದ ವಾಗ್ವಾದವನ್ನು ಕೇಸರಿ ಶಾಲಿಗೆ ತಂದು ನೈತಿಕ ಪೋಲಿಸ್ ಗಿರಿ ಮಾಡಿ ಹಲ್ಲೆ ನಡೆಸಲು ಇವರಿಗೆ ಅವಕಾಶ ಕೊಟ್ಟವರಾರು..? ಇದರಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ ತೀವ್ರ ಪ್ರತಿಭಟನೆ ಮೂಲಕ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಹಾಸ್ಟೆಲ್ ನಲ್ಲಿ ಹಲವು ವಿದ್ಯಾರ್ಥಿಗಳು ಮದ್ಯಪಾನ ಮಾಡುವವರಿದ್ದಾರೆ ಹಾಗೂ ಇನ್ನಿತರ ಮಾದಕ ಚಟಗಳಿಗೆ ಬಲಿಯಾಗಿದ್ದಾರೆಯೇ ಎಂಬುದನ್ನು ಕೂಡ ಪರೀಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್