ಕುಶಾಲನಗರ : ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಜನೆಗೈಯ್ಯುತ್ತಿರುವ ಎಸ್ಸೆಸ್ಸೆಫ್ ಕಾರ್ಯಕರ್ತನಾದ ರಾಝಿಕ್ ನ ಮೇಲೆ RSS ಗೂಂಡಾ ಕಾರ್ಯಕರ್ತರು ಹಾಸ್ಟೆಲ್ ಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆಗೈದಿರುವ ಘಟನೆ ನಡೆದಿದ್ದು SSF ಕೊಡಗು ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆರವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಪಾನಮತ್ತನಾಗಿ ಬಂದ ಸಹಪಾಠಿಯೊಬ್ಬನೊಂದಿಗೆ ಕ್ಷುಲ್ಲಕ ವಿಚಾರಕ್ಕಾಗಿ ವಾಗ್ವಾದಗಳು ನಡೆದಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಆರೆಸ್ಸೆಸ್ಸ್ ಗೂಂಡಾಗಳು ವಿದ್ಯಾರ್ಥಿಯ ಮೇಲೆ ಹಲ್ಲೆಗೈದಿರುವುದು ಅಕ್ಷಮ್ಯ ಅಪರಾಧವಾಗಿದೆ,ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಅಕ್ರಮವಾಗಿ ಹಾಸ್ಟೆಲ್ ಪ್ರವೇಶಿಸಿ ಅಲ್ಲಿನ ಬಾಗಿಲು ಮುರಿದು ಹಲ್ಲೆಗೈದಿರುವುದು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದೆ,ಯಾವುದೋ ವಿಚಾರಕ್ಕೆ ಉಂಟಾದ ವಾಗ್ವಾದವನ್ನು ಕೇಸರಿ ಶಾಲಿಗೆ ತಂದು ನೈತಿಕ ಪೋಲಿಸ್ ಗಿರಿ ಮಾಡಿ ಹಲ್ಲೆ ನಡೆಸಲು ಇವರಿಗೆ ಅವಕಾಶ ಕೊಟ್ಟವರಾರು..? ಇದರಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ ತೀವ್ರ ಪ್ರತಿಭಟನೆ ಮೂಲಕ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಹಾಸ್ಟೆಲ್ ನಲ್ಲಿ ಹಲವು ವಿದ್ಯಾರ್ಥಿಗಳು ಮದ್ಯಪಾನ ಮಾಡುವವರಿದ್ದಾರೆ ಹಾಗೂ ಇನ್ನಿತರ ಮಾದಕ ಚಟಗಳಿಗೆ ಬಲಿಯಾಗಿದ್ದಾರೆಯೇ ಎಂಬುದನ್ನು ಕೂಡ ಪರೀಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ