ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಬಂಧಿಸಿದ ಸಚಿವರು, ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಸಂಜೆ ನಡೆಸಿದ ಸಭೆ ಮುಕ್ತಾಯವಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶಾಲೆಗಳಲ್ಲಿ ಸಮವಸ್ತ್ರ ಕುರಿತ ವಿವಾದ ಆಗಿತ್ತು. ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ನ್ಯಾಯಾಲಯ ಯಾವುದೇ ತೀರ್ಪು ನೀಡಿದರೂ ನಾವು ಅದನ್ನು ಗೌರವಿಸಬೇಕು. ಈಗ ವಿದ್ಯಾರ್ಥಿಗಳಲ್ಲಿ ಗೊಂದಲ ಕಡಿಮೆಯಾಗಿದೆ. ಬಾಹ್ಯಶಕ್ತಿಗಳಿಂದ ಪ್ರಚೋದನೆ ಇನ್ನೂ ಇದೆ. ಅದು ಕೂಡ ನಿವಾರಣೆಯಾಗಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಸಂಯಮದಿಂದ ವರ್ತಿಸುತ್ತಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ. ಶಾಂತಿ ಸುವ್ಯವಸ್ಥೆ ಕಾಪಾಡಬೇಕು, ಮುಂದಿನ ಆದೇಶದವರೆಗೂ ಯಾವುದೇ ಧಾರ್ಮಿಕ ವಸ್ತ್ರ ಸಂಹಿತೆ ಹಾಕಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.
ಸೋಮವಾರದಿಂದ ಶಾಲೆಗಳು ಪುನಾರಂಭವಾಗುತ್ತವೆ. ಎರಡನೇ ಹಂತದಲ್ಲಿ ಪಿಯುಸಿ ತರಗತಿಳನ್ನು ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದರು. ನಾಳೆ ಬೆಳಗ್ಗೆ ಶಿಕ್ಷಣ ಇಲಾಖೆಯೊಂದಿಗೆ ಸಭೆ ಮಾಡುತ್ತಿದ್ದೇನೆ. ಬಳಿಕ ಸಂಜೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತಿದ್ದೇನೆ. ಆ ಬಳಿಕ ಪಿಯು ತರಗತಿಗಳ ಪುನರಾರಂಭದ ಬಗ್ಗೆ ತಿಳಿಸಲಾಗುತ್ತದೆ ಎಂದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ