ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 10/02/2022 ರಂದು ಗುರುವಾರ ಮಗ್ರಿಬ್ ನಮಾಝಿನ ಬಳಿಕ ಸುನ್ನಿ ಸೆಂಟರ್ನಲ್ಲಿ ಸೆಕ್ಟರ್ ಅಧ್ಯಕ್ಷರಾದ ರಫೀಖ್ ಅಂಜದಿ ಇಂದ್ರಾಜೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸುಳ್ಯ ಡಿವಿಶನ್ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಖಿ ಕಾರ್ಯಕ್ರಮ ಉಧ್ಘಾಟಿಸಿ ಕಾರ್ಯಕರ್ತರಿಗೆ ಕೆಲವು ಹಿತವಚನಗಳನ್ನು ನೀಡಿದರು.ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಶಮೀರ್ ಕೆ.ಎಂ ವರದಿ ಹಾಗೂ ಲೆಕ್ಕಪತ್ರ ವಾಚಿಸಿದರು.
ಡಿವಿಷನ್ ನಾಯಕರೂ ಸೆಕ್ಟರ್ ಉಸ್ತುವಾರಿಗಳೂ ಆದ ನೌಷಾದ್ ಕೆರೆಮೂಲೆಯವರ ಮುಂದಾಲುತ್ವದಲ್ಲಿ ಸೆಕ್ಟರ್ ಸಮಿತಿಯನ್ನು ಬರ್ಖಾಸ್ತುಗೊಳಿಸಿ ,ನೂತನ ಸಮಿತಿಯನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ರಿಯಾನ್ ಸಹದಿ ತಂಬಿನಮಕ್ಕಿ,ಪ್ರಧಾನ ಕಾರ್ಯದರ್ಶಿಯಾಗಿ ನೌಷಾದ್ ಅಹ್ಸನಿ ಬೆಳ್ಳಾರೆ,ಕೋಶಾಧಿಕಾರಿಯಾಗಿ ಶಮೀರ್ ಪಳ್ಳಿಮಜಲ್ ರನ್ನೂ ವಿವಿಧ ಎಭಾಗಗಳಿಗೆ 8 ಕಾರ್ಯದರ್ಶಿಗಳನ್ನೂ,ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.ಬಳಿಕ ಡಿವಿಶನ್ ಅಧ್ಯಕ್ಷರಾದ ಫೈಝಲ್ ಝುಹ್ರಿ ಅವರಿಂದ ಸಂಘಟನಾ ತರಗತಿ ನಡೆಯಿತು.ಡಿವಿಶನ್ ನಾಯಕರಾದ ಹಸೈನಾರ್ ನೆಲ್ಲಿಕ್ಕಟ್ಟೆ,ಕೆ.ಸಿ .ಎಫ್ ನಾಯಕರಾದ ಲತೀಫ್ ಬಿಸ್ಮಿಲ್ಲಾ ಬೆಳ್ಳಾರೆ ಮುಂತಾದ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ರಿಯಾನ್ ಸಹದಿ ಸ್ವಾಗತಿಸಿ ನೂತನ ಪ್ರಧಾನ ಕಾರ್ಯದರ್ಶಿ ನೌಷಾದ್ ಅಹ್ಸನಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ