ಹೊಸದಿಲ್ಲಿ, ಫೆಬ್ರವರಿ.13: ಕರ್ನಾಟಕದ ಕಾಲೇಜೊಂದರಿಂದ ಹಿಜಾಬ್ ಬಗ್ಗೆ ಆರಂಭವಾದ ವಿವಾದವನ್ನು ತಡೆಯಲು ಆಗುತ್ತಿಲ್ಲ. ಹಿಜಾಬ್ ಗಲಾಟೆ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಈ ಕುರಿತು ಮತ್ತೊಮ್ಮೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ಉವೈಸಿ, “ಇನ್ಶಾ ಅಲ್ಲಾ ಒಂದು ದಿನ ಹಿಜಾಬಿ ಪ್ರಧಾನಿಯಾಗುತ್ತಾರೆ” ಎಂದು ಬರೆದಿದ್ದಾರೆ.
ಟ್ವೀಟ್ ವಿಡಿಯೋದಲ್ಲಿ ಮಾತನಾಡಿರುವ ಉವೈಸಿ, “ನಮ್ಮ ಹೆಣ್ಣುಮಕ್ಕಳು ಹಿಜಾಬ್ ಧರಿಸಲು ಬಯಸಿದರೆ ಅಮ್ಮ-ಅಬ್ಬಾ ಹೇಳುವರು – ಮಗು ಧರಿಸು. ಯಾರು ನಿಮ್ಮನ್ನು ತಡೆಯುತ್ತಾರೆ ಎಂದು ನಾವು ನೋಡುತ್ತೇವೆ. ಹಿಜಾಬ್ ಧರಿಸಿ, ಕಾಲೇಜಿಗೆ ಹೋಗುತ್ತಾರೆ, ಕಲೆಕ್ಟರ್ ಆಗುತ್ತಾರೆ, ಬಿಜಿನೆಸ್ ಮ್ಯಾನ್ ಆಗುತ್ತಾರೆ, ಎಸ್ಡಿಎಂ ಕೂಡ ಆಗುತ್ತಾರೆ ಮತ್ತು ಮುಂದೊಂದು ದಿನ ಈ ದೇಶದಲ್ಲಿ ಹೆಣ್ಣು ಮಗು ಹಿಜಾಬ್ ಧರಿಸಿ ಪ್ರಧಾನಿಯಾಗುತ್ತಾರೆ” ಎಂದು ಹೇಳಿದ್ದಾರೆ.
ಈ ಹಿಂದೆ ಅಸದುದ್ದೀನ್ ಉವೈಸಿ ಅವರು ಹಿಜಾಬ್ ವಿವಾದದಲ್ಲಿ ಪುಟ್ಟಸ್ವಾಮಿ ತೀರ್ಪನ್ನು ಉಲ್ಲೇಖಿಸಿದ್ದರು. ಭಾರತದ ಸಂವಿಧಾನ ನಿಖಾಬ್ ಅಥವಾ ಹಿಜಾಬ್ ಧರಿಸುವ ಹಕ್ಕನ್ನು ನೀಡಿದೆ. ಪುಟ್ಟಸ್ವಾಮಿ ಅವರ ತೀರ್ಪು ಈ ಅವಕಾಶ ನೀಡುತ್ತದೆ ಎಂದು ಉವೈಸಿ ಹೇಳಿದ್ದರು. ಇದು ನಮ್ಮ ಗುರುತು. ಆ ಹುಡುಗರ ಗುಂಪಿಗೆ ಉತ್ತರಿಸಿದ ಹುಡುಗಿಗೆ ನಾನು ನಮಸ್ಕರಿಸುತ್ತೇನೆ. ಭಯ ಮತ್ತು ಗಾಬರಿ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಚುನಾವಣಾ ರಾಲಿ ಉದ್ದೇಶಿಸಿ ಮಾತನಾಡಿದ ಉವೈಸಿ, ಯಾವುದೇ ಮುಸ್ಲಿಂ ಮಹಿಳೆ ಯಾವುದೇ ಭಯವಿಲ್ಲದೆ ಹಿಜಾಬ್ ಧರಿಸಬಹುದು ಎಂದು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ