ಮಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕೆಲವು ಪತ್ರಕರ್ತರ ವರ್ತನೆಯು ಆಕ್ಷೇಪಾರ್ಹವಾಗಿದ್ದು ಶಾಲಾ ಕಾಲೇಜುಗಳ ಆವರಣದಲ್ಲೇ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಎಸ್ವೈಎಸ್ ರಾಜ್ಯಾಧ್ಯಕ್ಷ ಡಾ| ಎಂ.ಎಸ್.ಎಂ ಅಬ್ದುರ್ರಶೀದ್ ಝೈನಿ ಆಗ್ರಹಿಸಿದ್ದಾರೆ.
ಪತ್ರಕರ್ತನೋರ್ವ ಭಯಭೀತಳಾದ ವಿದ್ಯಾರ್ಥಿನಿಯೋರ್ವಳನ್ನು ಬೆನ್ನಟ್ಟಿ ವಿಡಿಯೋ ಮಾಡುತ್ತಿರುವ ಕರುಣಾಜನಕ ದೃಶ್ಯವೊಂದು ವೈರಲಾಗುತ್ತಿದೆ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಅಲ್ಲದೆ, ಮಾಧ್ಯಮಗಳು ತಲುಪಿರುವ ನೈತಿಕ ಅಧಃಪತನಕ್ಕೆ ಸಾಕ್ಷಿಯೂ ಆಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಬಗ್ಗೆ ಸ್ವಯಂಪ್ರೇರಿತರಾಗಿ ಕೇಸು ದಾಖಲಿಸಬೇಕು.ಇಂತಹ ಸಂದರ್ಭದಲ್ಲಿ ಮಕ್ಕಳ ನೆರವಿಗೆ ಬಾರದ ಶಿಕ್ಷಕ ಶಿಕ್ಷಕಿಯರ ವಿರುದ್ಧವೂ ಕ್ರಮಕೈಗೊಳ್ಳಬೇಕು. ಸಂತ್ರಸ್ತ ವಿದ್ಯಾರ್ಥಿನಿಯರಿಗೆ ನ್ಯಾಯವನ್ನು ಖಾತರಿಪಡಿಸಬೇಕು.
ಶಾಲಾ ಕಾಲೇಜು ಆವರಣದಲ್ಲಿ ಭಯಾನಕ ವಾತಾವರಣ ಸೃಷ್ಟಿಸುವ ಪತ್ರಕರ್ತರ ವಿರುದ್ಧ ಆಯೋಗವು ಕ್ರಮ ಕೈಗೊಳ್ಳಬೇಕಾಗಿರುವುದು ತುರ್ತು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಎಸ್ವೈಎಸ್,
ಪತ್ರಕರ್ತರು ಶಾಲಾ-ಕಾಲೇಜು ಆವರಣ ಪ್ರವೇಶಿಸಿ ವಿದ್ಯಾರ್ಥಿಗಳಿಂದ ಬಲವಂತದ ಹೇಳಿಕೆ ಪಡೆಯದಂತೆ ಆಯೋಗವು ಆದೇಶಿಸಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ