ಮಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕೆಲವು ಪತ್ರಕರ್ತರ ವರ್ತನೆಯು ಆಕ್ಷೇಪಾರ್ಹವಾಗಿದ್ದು ಶಾಲಾ ಕಾಲೇಜುಗಳ ಆವರಣದಲ್ಲೇ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಎಸ್ವೈಎಸ್ ರಾಜ್ಯಾಧ್ಯಕ್ಷ ಡಾ| ಎಂ.ಎಸ್.ಎಂ ಅಬ್ದುರ್ರಶೀದ್ ಝೈನಿ ಆಗ್ರಹಿಸಿದ್ದಾರೆ.
ಪತ್ರಕರ್ತನೋರ್ವ ಭಯಭೀತಳಾದ ವಿದ್ಯಾರ್ಥಿನಿಯೋರ್ವಳನ್ನು ಬೆನ್ನಟ್ಟಿ ವಿಡಿಯೋ ಮಾಡುತ್ತಿರುವ ಕರುಣಾಜನಕ ದೃಶ್ಯವೊಂದು ವೈರಲಾಗುತ್ತಿದೆ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಅಲ್ಲದೆ, ಮಾಧ್ಯಮಗಳು ತಲುಪಿರುವ ನೈತಿಕ ಅಧಃಪತನಕ್ಕೆ ಸಾಕ್ಷಿಯೂ ಆಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಬಗ್ಗೆ ಸ್ವಯಂಪ್ರೇರಿತರಾಗಿ ಕೇಸು ದಾಖಲಿಸಬೇಕು.ಇಂತಹ ಸಂದರ್ಭದಲ್ಲಿ ಮಕ್ಕಳ ನೆರವಿಗೆ ಬಾರದ ಶಿಕ್ಷಕ ಶಿಕ್ಷಕಿಯರ ವಿರುದ್ಧವೂ ಕ್ರಮಕೈಗೊಳ್ಳಬೇಕು. ಸಂತ್ರಸ್ತ ವಿದ್ಯಾರ್ಥಿನಿಯರಿಗೆ ನ್ಯಾಯವನ್ನು ಖಾತರಿಪಡಿಸಬೇಕು.
ಶಾಲಾ ಕಾಲೇಜು ಆವರಣದಲ್ಲಿ ಭಯಾನಕ ವಾತಾವರಣ ಸೃಷ್ಟಿಸುವ ಪತ್ರಕರ್ತರ ವಿರುದ್ಧ ಆಯೋಗವು ಕ್ರಮ ಕೈಗೊಳ್ಳಬೇಕಾಗಿರುವುದು ತುರ್ತು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಎಸ್ವೈಎಸ್,
ಪತ್ರಕರ್ತರು ಶಾಲಾ-ಕಾಲೇಜು ಆವರಣ ಪ್ರವೇಶಿಸಿ ವಿದ್ಯಾರ್ಥಿಗಳಿಂದ ಬಲವಂತದ ಹೇಳಿಕೆ ಪಡೆಯದಂತೆ ಆಯೋಗವು ಆದೇಶಿಸಬೇಕು ಎಂದು ಪ್ರಕಟನೆಯಲ್ಲಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ