ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ಮುಂದುವರಿಸಿ ಅರ್ಜಿದಾರರ ಪರ ಹಲವು ವಕೀಲರ ವಾದ ಆಲಿಸಿ ಶುಕ್ರವಾರ ಮಧ್ಯಾಹ್ನಕ್ಕೆ ಮುಂದೂಡಿಕೆ ಮಾಡಿದೆ.
ಅರ್ಜಿದಾರರ ಪರ ವಕೀಲ ರಹಮತುಲ್ಲಾ ಕೊತ್ವಾಲ್ ವಾದ ಮಂಡನೆ ನಡೆಸಿ ಧರ್ಮ ಸ್ವಾತಂತ್ರ್ಯದ ಬಗ್ಗೆ ಪ್ರಶ್ನಿಸಿದರು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರದ ಕ್ರಮಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.
ಉತ್ತರ ನೀಡಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಈ ಬಗ್ಗೆ ಸರಿಯಾದ ಅರ್ಜಿ ಸಲ್ಲಿಸಿಲ್ಲ, ಪೇಜ್ ನಂಬರ್ ಹಾಕಿಲ್ಲ. ಕೋರ್ಟ್ ಸಮಯ ವ್ಯರ್ಥ ಮಾಡಬೇಡಿ. ಅಂತರ್ ರಾಷ್ಟ್ರೀಯ ಒಪ್ಪಂದಗಳನ್ನು ತಪ್ಪಾಗಿ ಉಲ್ಲೇಖ ಮಾಡಿದ್ದಾರೆ. ನಿಯಮದಂತೆ ನೀವು ಪ್ರಮಾಣ ಪತ್ರ ಸಲ್ಲಿಸಿದ್ದೀರಾ ? ಎಂದು ಪ್ರಶ್ನೆ ಮಾಡಿದರು.
ನ್ಯಾಯ ಪೀಠದ ಪ್ರಶ್ನೆಗೆ ವಕೀಲ ಡಾ.ವಿನೋದ್ ಕುಲಕರ್ಣಿ ನಿಯಮದಂತೆ ನಾವು ಪ್ರಮಾಣ ಪತ್ರ ಸಲ್ಲಿಸಿದ್ದೇವೆ ಎಂದು ಉತ್ತರ ನೀಡಿದ್ದಾರೆ. ವಿವಾದದಿಂದ ಮುಸ್ಲಿಂ ಹೆಣ್ಣು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ವಿನೋದ್ ಕುಲಕರ್ಣಿ ವಾದ ಮಂಡನೆ ಮಾಡಿದ್ದಾರೆ. ಇಂದೇ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ವಿನೋದ್ ಕುಲಕರ್ಣಿ ನ್ಯಾಯಪೀಠಕ್ಕೆ ಮನವಿ ಮಾಡಿದರಾದರೂ ಪೀಠ ವಿಚಾರಣೆ ಮುಂದೂಡಿತು.
ವಕೀಲ ಎ.ಎಂ.ದಾರ್ ಅವರ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯ ಪೀಠ ಮತ್ತೆ ಕ್ರಮವಾಗಿ ಅರ್ಜಿ ಸಲ್ಲಿಸಲು ಹೇಳಿದೆ.ಯಾರ್ಯಾರೋ ವಾದ ಮಂಡನೆಗೆ ಬರುವುದು ಸರಿಯಲ್ಲ. ಇದುವರೆಗೆ ಸರಿಯಾದ ದಿಕ್ಕಿನಲ್ಲಿ ವಾದ ಮಂಡನೆಯಾಗಿದೆ ಎಂದು ನ್ಯಾಯ ಪೀಠ ಅಸಮಾಧಾನ ಹೊರ ಹಾಕಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ