ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ಮುಂದುವರಿಸಿ ಅರ್ಜಿದಾರರ ಪರ ಹಲವು ವಕೀಲರ ವಾದ ಆಲಿಸಿ ಶುಕ್ರವಾರ ಮಧ್ಯಾಹ್ನಕ್ಕೆ ಮುಂದೂಡಿಕೆ ಮಾಡಿದೆ.
ಅರ್ಜಿದಾರರ ಪರ ವಕೀಲ ರಹಮತುಲ್ಲಾ ಕೊತ್ವಾಲ್ ವಾದ ಮಂಡನೆ ನಡೆಸಿ ಧರ್ಮ ಸ್ವಾತಂತ್ರ್ಯದ ಬಗ್ಗೆ ಪ್ರಶ್ನಿಸಿದರು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರದ ಕ್ರಮಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.
ಉತ್ತರ ನೀಡಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಈ ಬಗ್ಗೆ ಸರಿಯಾದ ಅರ್ಜಿ ಸಲ್ಲಿಸಿಲ್ಲ, ಪೇಜ್ ನಂಬರ್ ಹಾಕಿಲ್ಲ. ಕೋರ್ಟ್ ಸಮಯ ವ್ಯರ್ಥ ಮಾಡಬೇಡಿ. ಅಂತರ್ ರಾಷ್ಟ್ರೀಯ ಒಪ್ಪಂದಗಳನ್ನು ತಪ್ಪಾಗಿ ಉಲ್ಲೇಖ ಮಾಡಿದ್ದಾರೆ. ನಿಯಮದಂತೆ ನೀವು ಪ್ರಮಾಣ ಪತ್ರ ಸಲ್ಲಿಸಿದ್ದೀರಾ ? ಎಂದು ಪ್ರಶ್ನೆ ಮಾಡಿದರು.
ನ್ಯಾಯ ಪೀಠದ ಪ್ರಶ್ನೆಗೆ ವಕೀಲ ಡಾ.ವಿನೋದ್ ಕುಲಕರ್ಣಿ ನಿಯಮದಂತೆ ನಾವು ಪ್ರಮಾಣ ಪತ್ರ ಸಲ್ಲಿಸಿದ್ದೇವೆ ಎಂದು ಉತ್ತರ ನೀಡಿದ್ದಾರೆ. ವಿವಾದದಿಂದ ಮುಸ್ಲಿಂ ಹೆಣ್ಣು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ವಿನೋದ್ ಕುಲಕರ್ಣಿ ವಾದ ಮಂಡನೆ ಮಾಡಿದ್ದಾರೆ. ಇಂದೇ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ವಿನೋದ್ ಕುಲಕರ್ಣಿ ನ್ಯಾಯಪೀಠಕ್ಕೆ ಮನವಿ ಮಾಡಿದರಾದರೂ ಪೀಠ ವಿಚಾರಣೆ ಮುಂದೂಡಿತು.
ವಕೀಲ ಎ.ಎಂ.ದಾರ್ ಅವರ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯ ಪೀಠ ಮತ್ತೆ ಕ್ರಮವಾಗಿ ಅರ್ಜಿ ಸಲ್ಲಿಸಲು ಹೇಳಿದೆ.ಯಾರ್ಯಾರೋ ವಾದ ಮಂಡನೆಗೆ ಬರುವುದು ಸರಿಯಲ್ಲ. ಇದುವರೆಗೆ ಸರಿಯಾದ ದಿಕ್ಕಿನಲ್ಲಿ ವಾದ ಮಂಡನೆಯಾಗಿದೆ ಎಂದು ನ್ಯಾಯ ಪೀಠ ಅಸಮಾಧಾನ ಹೊರ ಹಾಕಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ