janadhvani

Kannada Online News Paper

ಹಿಜಾಬ್: ವಖ್ಫ್ ಬೋರ್ಡ್ ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ- ಶಾಫಿ ಸಅದಿ

ಬೆಂಗಳೂರು,ಫೆ.17: ಹಿಜಾಬ್‌ಗೆ ಸಂಬಂಧಿಸಿದಂತೆ ರಾಜ್ಯ ವಕ್ಫ್ ಮಂಡಳಿಯು ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎನ್ ಕೆ ಎಂ ಶಾಫಿ ಸಅದಿ ಹೇಳಿದ್ದಾರೆ. ವೀಡಿಯೋ

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಬೆನ್ನಲ್ಲೇ ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಹಜ್, ವಕ್ಫ್ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

ಅಲ್ಪಸಂಖ್ಯಾತ ಇಲಾಖೆ ಅಡಿ ಬರುವ ಯಾವುದೇ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಸೇರಿದಂತೆ ಯಾವುದೇ ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಪ್ ಗಳನ್ನು ಧರಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಶಾಲೆ ಹಾಗೂ ತರಗತಿಗಳಲ್ಲಿ ಯಾವುದೇ ಧಾರ್ಮಿಕ ಬಾವುಟಗಳನ್ನು ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎನ್ ಕೆ ಎಂ ಶಾಫಿ ಸಅದಿಯವರು, ರಾಜ್ಯ ಅಲ್ಪಸಂಖ್ಯಾತ ಹಜ್, ವಕ್ಫ್ ಇಲಾಖೆ ಹೊರಡಿಸಿದ ಸುತ್ತೋಲೆಯೊಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿರುವುದು ಗಮನಕ್ಕೆ ಬಂದಿದೆ, ಈ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ, ಸದ್ಯ ಮಂಗಳೂರು ಪ್ರವಾಸದಲ್ಲಿದ್ದು, ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚಿಸಲಿದ್ದೇನೆ, ವಖ್ಫ್ ಮಂಡಳಿಯು ಹಿಜಾಬ್‌ಗೆ ಸಂಬಂಧಿಸಿದಂತೆ ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದಿದ್ದಾರೆ.