ಬೆಂಗಳೂರು,ಫೆ.17: ಹಿಜಾಬ್ಗೆ ಸಂಬಂಧಿಸಿದಂತೆ ರಾಜ್ಯ ವಕ್ಫ್ ಮಂಡಳಿಯು ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎನ್ ಕೆ ಎಂ ಶಾಫಿ ಸಅದಿ ಹೇಳಿದ್ದಾರೆ. ವೀಡಿಯೋ
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಬೆನ್ನಲ್ಲೇ ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಹಜ್, ವಕ್ಫ್ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.
ಅಲ್ಪಸಂಖ್ಯಾತ ಇಲಾಖೆ ಅಡಿ ಬರುವ ಯಾವುದೇ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆ ಸೇರಿದಂತೆ ಯಾವುದೇ ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು, ಸ್ಕಾರ್ಪ್ ಗಳನ್ನು ಧರಿಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ಶಾಲೆ ಹಾಗೂ ತರಗತಿಗಳಲ್ಲಿ ಯಾವುದೇ ಧಾರ್ಮಿಕ ಬಾವುಟಗಳನ್ನು ಬಳಕೆ ಮಾಡುವಂತಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಎನ್ ಕೆ ಎಂ ಶಾಫಿ ಸಅದಿಯವರು, ರಾಜ್ಯ ಅಲ್ಪಸಂಖ್ಯಾತ ಹಜ್, ವಕ್ಫ್ ಇಲಾಖೆ ಹೊರಡಿಸಿದ ಸುತ್ತೋಲೆಯೊಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿರುವುದು ಗಮನಕ್ಕೆ ಬಂದಿದೆ, ಈ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ, ಸದ್ಯ ಮಂಗಳೂರು ಪ್ರವಾಸದಲ್ಲಿದ್ದು, ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚಿಸಲಿದ್ದೇನೆ, ವಖ್ಫ್ ಮಂಡಳಿಯು ಹಿಜಾಬ್ಗೆ ಸಂಬಂಧಿಸಿದಂತೆ ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲ ಎಂದಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ