ಬೆಂಗಳೂರು,ಫೆ.21- ಶಿವಮೊಗ್ಗದಲ್ಲಿ ಯುವಕನ ಹತ್ಯೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಪ್ರಾರಂಭವಾಗಿದ್ದು, ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಶಿಕ್ಷೆಯಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ನಮ್ಮ ಸಂಘಟನೆಯ ಹರ್ಷ ಎಂಬ ಕಾರ್ಯಕರ್ತನ ಕಗ್ಗೊಲೆಯಾಗಿದೆ. ಈಗಾಗಲೇ ತನಿಖೆ ಪ್ರಾರಂಭವಾಗಿದ್ದು, ಹಲವು ಸುಳಿವುಗಳು ಸಿಕ್ಕಿವೆ. ಶೀಘ್ರದಲ್ಲೇ ಆರೋಪಿಗಳ ಬಂಧನವಾಗಲಿದೆ.
ಶಿವಮೊಗ್ಗದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಅಕಾರಿಗಳಿಗೆ ಸೂಚಿಸಲಾಗಿದೆ. ನಗರ ಹಾಗೂ ಸುತ್ತಮುತ್ತಲ ಜನರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ. ನ್ಯಾಯಯುತವಾಗಿ ಪ್ರಕರಣದ ತನಿಖೆ ನಡೆಸಲಾಗುತ್ತದೆ.
ಯಾರೂ ಕೂಡ ಭಾವೋದ್ವೇಗಕ್ಕೆ ಒಳಗಾಗಬಾರದು. ಶಾಂತಿ ಕಾಪಾಡಬೇಕು. ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ತರ್ಕ ಬಿಟ್ಟು ಮಾತನಾಡುತ್ತಾರೆ. ತನಿಖೆಯ ನಂತರ ಎಲ್ಲ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ